Featured

ಉಳ್ಳಾಲ : ಆಧಾರ್ ಕಾರ್ಡ್ ಇಲ್ಲದ ಶಾಲಾ ಮಕ್ಕಳನ್ನು ಅರ್ಧ ದಾರಿಯಲ್ಲಿ ಇಳಿಸಿದ KSRTC ಬಸ್ ಕಂಡಕ್ಟರ್ – Vishwanews24

ಉಳ್ಳಾಲ : ಆಧಾರ್ ಕಾರ್ಡ್ ಇಲ್ಲದ ಶಾಲಾ ಮಕ್ಕಳನ್ನು ಅರ್ಧ ದಾರಿಯಲ್ಲಿ ಇಳಿಸಿದ ಕೆಎಸ್ಆರ್ ಟಿಸಿ ಬಸ್ ಕಂಡಕ್ಟರ್

ಉಳ್ಳಾಲ : ಆಧಾರ ಕಾರ್ಡ್ ತೋರಿಸಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ನಲ್ಲಿ ಶಾಲೆಗೆ ತೆರಳುತ್ತಿದ್ದ ಐವರು  ಪ್ರಾಥಮಿಕ ಶಾಲಾ ವಿಧ್ಯಾರ್ಥಿನಿಯ ರನ್ನು ಬಸ್ ಕಂಡಕ್ಟರ್ ಅರ್ಧ ದಾರಿಯಲ್ಲೇ ಕೆಳಗಿಳಿಸಿದ ಘಟನೆ ನಡೆದಿದ್ದು, ಸುದ್ದಿ ತಿಳಿಯುತ್ತಿದ್ದ ಸ್ಥಳೀಯರು ಕುಂಪಲದಲ್ಲಿ ಬಸ್ ತಡೆದು ನಿರ್ವಾಹಕನನ್ನು ತರಾಟೆ ತೆಗೆದುಕೊಂಡಿದ್ದಾರೆ.

‘ಮಂಗಳೂರು–ಕುಂಪಲ ನಡುವೆ ಸಂಚರಿಸುವ ಕೆಎಸ್‌ಆರ್‌ಟಿಸಿ ನಗರ ಸಾರಿಗೆಯ ಬಸ್‌ನಲ್ಲಿ ಕುಂಪಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡನೇ ಮತ್ತು ಮೂರನೇ ತರಗತಿಯ ಐವರು ವಿದ್ಯಾರ್ಥಿನಿಯರು ಶಾಲೆಗೆ ಹೊರಟಿದ್ದರು. ಮಕ್ಕಳು ಆಧಾರ್ ಕಾರ್ಡ್ ತೋರಿಸದ ಹಿನ್ನಲೆ ಬಸ್‌ನ ನಿರ್ವಾಹಕ ಹುಸೇನ್ ಸಾಬ್ ಐ ಹಳ್ಳೂರ ಅವರು, ‘ಆಧಾರ್ ಕಾರ್ಡ್ ತೋರಿಸದಿದ್ದರೆ ಉಚಿತ ಪ್ರಯಾಣಕ್ಕೆ ನಿಮಗೆ ಅವಕಾಶ ಇಲ್ಲ’ ಎಂದು ಟಿಕೆಟ್‌ಗೆ ಹಣ ಕೇಳಿದ್ದರು. ಹಣ ನೀಡಿ ಟಿಕೆಟ್‌ ಪಡೆಯದ ಕಾರಣಕ್ಕೆ ಆ ಹೆಣ್ಣು ಮಕ್ಕಳನ್ನು ಬಸ್ಸಿನಿಂದ ಅರ್ಧ ದಾರಿಯಲ್ಲೇ ಕೆಳಗೆ ಇಳಿಸುವ ಮೂಲಕ ನಿರ್ವಾಹಕ ಅಮಾನವೀಯವಾಗಿ ವರ್ತಿಸಿದ್ದಾರೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯಕರು ಕುಂಪಲ ಶಾಲೆಯ ಎದುರು ಸಂಜೆ ಅದೇ ಬಸ್ ಅನ್ನು ತಡೆದು ನಿಲ್ಲಿಸಿ ನಿರ್ವಾಹಕರನ್ನು ತರಾಟೆಗೆ ತೆಗೆದುಕೊಂಡರು. ಕೆಎಸ್ಆರ್‌ಟಿಸಿ ಅಧಿಕಾರಿಗಳನ್ನು ಸಂಪರ್ಕಿಸಿದ ಅವರು, ‘ಮಕ್ಕಳ ಜೊತೆ ಮಾನವೀಯವಾಗಿ ವರ್ತಿಸಿದ ನಿರ್ವಾಹಕನ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

5 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

6 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

6 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

6 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago