ಉಳ್ಳಾಲ: ಉಳ್ಳಾಲ ಠಾಣಾಧಿಕಾರಿ ಸಂದೀಪ್ ಅವರ ಹೆಸರಿನಲ್ಲಿ ಇನ್ಸ್ಟಾ ಗ್ರಾಮ್ ನಕಲಿ ಖಾತೆಯನ್ನು ತೆರೆದಿರುವ ಹ್ಯಾಕರ್ ಗಳು ಹಲವರಲ್ಲಿ ಹಣಕ್ಕಾಗಿ ಬೇಡಿಕೆಯನ್ನು ಇಡುತ್ತಿದ್ದಾರೆ. ಈ ಕುರಿತು ಠಾಣಾಧಿಕಾರಿ ತನ್ನ ಇನ್ಸ್ಟಾ ಗ್ರಾಮ್ ಹಾಗೂ ಫೇಸ್ ಬುಕ್ ಮುಖಪುಟದಲ್ಲಿ ದೂರು ಹಂಚಿಕೊಂಡಿದ್ದಾರೆ.
ಕಳೆದ ಎರಡು ದಿನಗಳಿಂದ ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಸಂದೀಪ್ ಅವರ ಸ್ನೇಹಿತರಲ್ಲಿ ಹಣಕ್ಕಾಗಿ ಬೇಡಿಕೆ ಇಡಲಾಗಿದೆ. ಎಲ್ಲಾ ಸ್ನೇಹಿತರಲ್ಲಿ ಕಷ್ಟದಲ್ಲಿರುವ ಕಾರಣ ಹೇಳಿ 7,500 ರೂ ಕೊಡುವಂತೆ ಸಂದೇಶ ಹಾಕಲಾಗುತ್ತಿದೆ. ಇದು ಠಾಣಾಧಿಕಾರಿ ಗಮನಕ್ಕೆ ಬಂದು ಸಾಮಾಜಿಕ ಜಾಲತಾಣಗಳಲ್ಲಿ ಹಣ ನೀಡದಂತೆ ಸಂದೇಶ ಹಾಕಿದ್ದಾರೆ.
ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಸೇರಿದಂತೆ ಗಣ್ಯರು, ಪತ್ರಕರ್ತರ ಫೇಸ್ ಬುಕ್ ಅಕೌಂಟ್ ಗಳನ್ನು ಹ್ಯಾಕ್ ಮಾಡಿ ಸ್ನೇಹಿತರನ್ನು ಮತ್ತೆ ತನ್ನ ಖಾತೆಗೆ ಸೇರಿಸಿಕೊಂಡು ಹಣವನ್ನು ಕೇಳುವ ಜಾಲ ದ.ಕ ಜಿಲ್ಲೆಯಾದ್ಯಂತ ಹಲವು ತಿಂಗಳಿನಿಂದ ನಡೆಯುತ್ತಿದೆ. ಈ ಕುರಿತು ಸೈಬರ್ ಸೆಲ್ನಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಹ್ಯಾಕರ್ ಗಳ ಪತ್ತೆ ಅಸಾಧ್ಯವಾಗುತ್ತಿದೆ. ಮೂಲವೊಂದರ ಪ್ರಕಾರ ಉತ್ತರಭಾರತ ಮೂಲದ ರೈತರುಗಳ ಬ್ಯಾಂಕ್ ಖಾತೆಗೆ, ಹ್ಯಾಕರ್ ಗಳು ಹಣವನ್ನು ಮೋಸದ ಮೂಲಕ ವರ್ಗಾಯಿಸುತ್ತಿದ್ದಾರೆ. ಅಲ್ಲಿ ರೈತರಿಗೆ ಸಣ್ಣ ಮೊತ್ತವನ್ನು ನೀಡಿ ಅವರಿಂದ ಬ್ಯಾಂಕ್ ಖಾತೆ ಸಂಖ್ಯೆ, ಒಟಿಪಿ ಪಡೆದುಕೊಂಡು ಹಣವನ್ನು ವರ್ಗಾಯಿಸುತ್ತಿದ್ದಾರೆ. ಜಿಲ್ಲೆಯ ಸೈಬರ್ ಸೆಲ್ ಪೊಲೀಸರು ಅಕೌಂಟ್ ಫ್ರೀಝ್ ಮಾಡಿ ಉತ್ತರಭಾರತಕ್ಕೆ ತಲುಪುವ ಹೊತ್ತಲ್ಲಿ ಬಡರೈತ ಮಾತ್ರ ಪೊಲೀಸರಿಗೆ ಎದುರಾಗುತ್ತಿದ್ದಾನೆ. ಆದರೆ ಆರೋಪಿಗಳ ಸುಳಿವು ಲಭ್ಯವಾಗುತ್ತಿಲ್ಲ.
ಸೆಂಟ್ರಲೈಜ್ ಆಗಬೇಕಿದೆ ಸೈಬರ್ ಠಾಣೆ: ಅಂತರ್ಜಾಲದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ವಂಚನೆಗಳು ನಡೆಯುತ್ತಲೇ ಇದೆ. ಇಡೀ ದೇಶದುದ್ದಕ್ಕೂ ವಂಚನೆಗಳು ನಿರಂತರವಾಗಿ ನಡೆಯುತ್ತಲೇ ಇರುತ್ತದೆ. ರಾಜ್ಯ ಪೊಲೀಸ್ ಇಲಾಖೆಯಡಿ ಸೈಬರ್ ಠಾಣೆಗಳಿರುವುದರಿಂದ ತನಿಖೆ ವೇಗವನ್ನು ಪಡೆಯದೆ ಹಲವು ಕೋನಗಳಲ್ಲಿ ಅಡಚಣೆಗಳು ಉಂಟಾಗಿ ಆರೋಪಿಗಳ ಪತ್ತೆ ಅಸಾಧ್ಯವಾಗುತ್ತಿದೆ. ಇದರಿಂದ ಕೇಂದ್ರದಿಂದಲೇ ಸೈಬರ್ ಠಾಣೆ ನಿರ್ವಹಿಸುವ ಯೋಜನೆ ಜಾರಿಯಾದಲ್ಲಿ ಜಿಲ್ಲೆಯಲ್ಲಿ ಆಗುವ ಅಪರಾಧದ ಕುರಿತು ದೇಶದುದ್ದಕ್ಕೂ ಏಕಸಮಯದಲ್ಲಿ ತನಿಖೆಯನ್ನು ಆರಂಭಿಸಿ ತಕ್ಷಣಕ್ಕೆ ಆರೋಪಿ ಪತ್ತೆ ಸಾಧ್ಯವಾಗಬಹುದು ಅನ್ನುವ ಅಭಿಪ್ರಾಯ ಪೊಲೀಸರದ್ದಾಗಿದೆ.
Join our Whatsapp group by clicking the below link 👇👇
ಪಿಕಲ್ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್ನಲ್ಲಿ ಪತನ : ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…
ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ವಿರುದ್ಧ ಐವನ್ ಡಿಸೋಜಾ ತೀವ್ರ ಖಂಡನೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್…
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜುನೈದ್ ಡಿ ನೇಮಕ ಉಡುಪಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು…
ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಕೋಲ್ಕತ್ತಾ :ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ…
ಮಂಗಳೂರು: ನಂತೂರಿನಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಬೆಂಕಿ ಅವಘಡ ಮಂಗಳೂರು: ನಗರದ ನಂತೂರು ಜಂಕ್ಷನ್ ಬಳಿಯ ಅಪಾರ್ಟ್ಮೆಂಟ್ನಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ…