Categories: ಉಡುಪಿ

ಉಳ್ಳಾಲ : ಇನ್ಸ್ ಪೆಕ್ಟರ್ ಇನ್ಸ್ಟಾ ಗ್ರಾಮ್ ಹ್ಯಾಕ್: ನಕಲಿ ಖಾತೆಯಿಂದ ಹಣಕ್ಕಾಗಿ ಬೇಡಿಕೆ – Vishwanews24

ಉಳ್ಳಾಲ : ಇನ್ಸ್ ಪೆಕ್ಟರ್ ಇನ್ಸ್ಟಾ ಗ್ರಾಮ್ ಹ್ಯಾಕ್: ನಕಲಿ ಖಾತೆಯಿಂದ ಹಣಕ್ಕಾಗಿ ಬೇಡಿಕೆ

ಉಳ್ಳಾಲ: ಉಳ್ಳಾಲ ಠಾಣಾಧಿಕಾರಿ ಸಂದೀಪ್ ಅವರ ಹೆಸರಿನಲ್ಲಿ ಇನ್ಸ್ಟಾ ಗ್ರಾಮ್ ನಕಲಿ ಖಾತೆಯನ್ನು ತೆರೆದಿರುವ ಹ್ಯಾಕರ್ ಗಳು ಹಲವರಲ್ಲಿ ಹಣಕ್ಕಾಗಿ ಬೇಡಿಕೆಯನ್ನು ಇಡುತ್ತಿದ್ದಾರೆ. ಈ ಕುರಿತು ಠಾಣಾಧಿಕಾರಿ ತನ್ನ ಇನ್ಸ್ಟಾ ಗ್ರಾಮ್ ಹಾಗೂ ಫೇಸ್ ಬುಕ್ ಮುಖಪುಟದಲ್ಲಿ ದೂರು ಹಂಚಿಕೊಂಡಿದ್ದಾರೆ.

ಕಳೆದ ಎರಡು ದಿನಗಳಿಂದ ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಸಂದೀಪ್ ಅವರ ಸ್ನೇಹಿತರಲ್ಲಿ ಹಣಕ್ಕಾಗಿ ಬೇಡಿಕೆ ಇಡಲಾಗಿದೆ. ಎಲ್ಲಾ ಸ್ನೇಹಿತರಲ್ಲಿ ಕಷ್ಟದಲ್ಲಿರುವ ಕಾರಣ ಹೇಳಿ 7,500 ರೂ ಕೊಡುವಂತೆ ಸಂದೇಶ ಹಾಕಲಾಗುತ್ತಿದೆ. ಇದು ಠಾಣಾಧಿಕಾರಿ ಗಮನಕ್ಕೆ ಬಂದು ಸಾಮಾಜಿಕ ಜಾಲತಾಣಗಳಲ್ಲಿ ಹಣ ನೀಡದಂತೆ ಸಂದೇಶ ಹಾಕಿದ್ದಾರೆ.

ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಸೇರಿದಂತೆ ಗಣ್ಯರು, ಪತ್ರಕರ್ತರ ಫೇಸ್ ಬುಕ್ ಅಕೌಂಟ್ ಗಳನ್ನು ಹ್ಯಾಕ್ ಮಾಡಿ ಸ್ನೇಹಿತರನ್ನು ಮತ್ತೆ ತನ್ನ ಖಾತೆಗೆ ಸೇರಿಸಿಕೊಂಡು ಹಣವನ್ನು ಕೇಳುವ ಜಾಲ ದ.ಕ ಜಿಲ್ಲೆಯಾದ್ಯಂತ ಹಲವು ತಿಂಗಳಿನಿಂದ ನಡೆಯುತ್ತಿದೆ. ಈ ಕುರಿತು ಸೈಬರ್ ಸೆಲ್‍ನಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಹ್ಯಾಕರ್ ಗಳ ಪತ್ತೆ ಅಸಾಧ್ಯವಾಗುತ್ತಿದೆ. ಮೂಲವೊಂದರ ಪ್ರಕಾರ ಉತ್ತರಭಾರತ ಮೂಲದ ರೈತರುಗಳ ಬ್ಯಾಂಕ್ ಖಾತೆಗೆ, ಹ್ಯಾಕರ್ ಗಳು ಹಣವನ್ನು ಮೋಸದ ಮೂಲಕ ವರ್ಗಾಯಿಸುತ್ತಿದ್ದಾರೆ. ಅಲ್ಲಿ ರೈತರಿಗೆ ಸಣ್ಣ ಮೊತ್ತವನ್ನು ನೀಡಿ ಅವರಿಂದ ಬ್ಯಾಂಕ್ ಖಾತೆ ಸಂಖ್ಯೆ, ಒಟಿಪಿ ಪಡೆದುಕೊಂಡು ಹಣವನ್ನು ವರ್ಗಾಯಿಸುತ್ತಿದ್ದಾರೆ. ಜಿಲ್ಲೆಯ ಸೈಬರ್ ಸೆಲ್ ಪೊಲೀಸರು ಅಕೌಂಟ್ ಫ್ರೀಝ್ ಮಾಡಿ ಉತ್ತರಭಾರತಕ್ಕೆ ತಲುಪುವ ಹೊತ್ತಲ್ಲಿ ಬಡರೈತ ಮಾತ್ರ ಪೊಲೀಸರಿಗೆ ಎದುರಾಗುತ್ತಿದ್ದಾನೆ. ಆದರೆ ಆರೋಪಿಗಳ ಸುಳಿವು ಲಭ್ಯವಾಗುತ್ತಿಲ್ಲ.

ಸೆಂಟ್ರಲೈಜ್ ಆಗಬೇಕಿದೆ ಸೈಬರ್ ಠಾಣೆ: ಅಂತರ್ಜಾಲದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ವಂಚನೆಗಳು ನಡೆಯುತ್ತಲೇ ಇದೆ. ಇಡೀ ದೇಶದುದ್ದಕ್ಕೂ ವಂಚನೆಗಳು ನಿರಂತರವಾಗಿ ನಡೆಯುತ್ತಲೇ ಇರುತ್ತದೆ. ರಾಜ್ಯ ಪೊಲೀಸ್ ಇಲಾಖೆಯಡಿ ಸೈಬರ್ ಠಾಣೆಗಳಿರುವುದರಿಂದ ತನಿಖೆ ವೇಗವನ್ನು ಪಡೆಯದೆ ಹಲವು ಕೋನಗಳಲ್ಲಿ ಅಡಚಣೆಗಳು ಉಂಟಾಗಿ ಆರೋಪಿಗಳ ಪತ್ತೆ ಅಸಾಧ್ಯವಾಗುತ್ತಿದೆ. ಇದರಿಂದ ಕೇಂದ್ರದಿಂದಲೇ ಸೈಬರ್ ಠಾಣೆ ನಿರ್ವಹಿಸುವ ಯೋಜನೆ ಜಾರಿಯಾದಲ್ಲಿ ಜಿಲ್ಲೆಯಲ್ಲಿ ಆಗುವ ಅಪರಾಧದ ಕುರಿತು ದೇಶದುದ್ದಕ್ಕೂ ಏಕಸಮಯದಲ್ಲಿ ತನಿಖೆಯನ್ನು ಆರಂಭಿಸಿ ತಕ್ಷಣಕ್ಕೆ ಆರೋಪಿ ಪತ್ತೆ ಸಾಧ್ಯವಾಗಬಹುದು ಅನ್ನುವ ಅಭಿಪ್ರಾಯ ಪೊಲೀಸರದ್ದಾಗಿದೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago