ಉಳ್ಳಾಲ : ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ಕುಂಪಲ ಹನುಮಾನ್ ನಗರದಲ್ಲಿ ಈ ಘಟನೆ ನಡೆದಿದ್ದು ಯೋಗೀಶ್(44) ಆತ್ಮಹತ್ಯೆಗೈದ ದುರ್ದೈವಿಯಾಗಿದ್ದಾರೆ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್ ಇಂದು ಬೆಳಗ್ಗೆ ತಮ್ಮ ಮನೆಗೆ ತಾಗಿಕೊಂಡಿರುವ ಶೌಚಾಲಯದ ಮರದ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.
ಯೋಗೀಶ್ ಸ್ವಸಹಾಯ ಗುಂಪೊಂದರ ಸದಸ್ಯರಾಗಿದ್ದು ಸಂಘದ ನಲ್ವತ್ತು ಸಾವಿರ ರೂಪಾಯಿಗಳನ್ನ ಬ್ಯಾಂಕಿಗೆ ಕಟ್ಟದೆ ಖರ್ಚು ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಸಂಘದ ಉಳಿದ ಸದಸ್ಯರು ಭಾನುವಾರ ಬೆಳಗ್ಗೆ ಮತ್ತು ಸಂಜೆ ಯೋಗೀಶ್ ಅವರ ಮನೆಗೆ ತೆರಳಿ ಹಣ ಕಟ್ಟುವಂತೆ ಪೀಡನೆ ಮಾಡಿದ್ದರು ಎಂಬ ಆರೋಪ ಇದೆ.
ಇದೇ ಅವಮಾನದಲ್ಲಿ ಯೋಗೀಶ್ ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಉಳ್ಳಾಲ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ. ಮೃತ ಯೋಗೀಶ್ ಇಬ್ಬರು ಪುಟ್ಟ ಗಂಡು ಮಕ್ಕಳು, ಪತ್ನಿ, ತಾಯಿಯನ್ನು ಅಗಲಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…