ಉಳ್ಳಾಲ : ರಸ್ತೆ ಬದಿಯಲ್ಲಿ ಒಂದು ದಿನದ ಮಗುವನ್ನು ಬಿಟ್ಟು ಹೋಗಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಅಂಬಿಕಾರೋಡಿನ ಗೇರು ಅಭಿವೃದ್ದಿ ಕೇಂದ್ರದ ಬಳಿ ನಡೆದಿದ್ದು, ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೊಕ್ಕೊಟ್ಟು ಕಾಪಿಕಾಡ್ ನಿವಾಸಿ ಅಮರ್ ಎಂಬವರ ಮನೆಯ ಎದುರುಗಡೆ ಗೇಟಿನ ಹೊರಗಡೆ ನಿಲ್ಲಿಸಿದ್ದ ಕಾರಿನ ಅಡಿಯಲ್ಲಿ ಮಗು ಪತ್ತೆಯಾಗಿದೆ. ಮನೆಮಂದಿ ಬೆಳಿಗ್ಗೆ ಏಳುವಾಗ ಮಗು ಕೂಗುತ್ತಿರುವುದನ್ನು ಗಮನಿಸಿ ಹೊರಹೋದಾಗ ಕಾರಿನ ಕೆಳಗಡೆ ಬಿಳಿ ಬಟ್ಟೆ ಯಲ್ಲಿ ಸುತ್ತಿದ ಸ್ಥಿತಿಯಲ್ಲಿ ಒಂದು ದಿನದ ಮಗು ಪತ್ತೆಯಾಗಿದೆ. ಕೂಡಲೇ ಮನೆಮಂದಿ ಉಪಚರಿಸಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸಲು ಕೇಂದ್ರ ಅನುಮೋದನೆ – Vishwanews24
ವೈದ್ಯಕೀಯ ಪರೀಕ್ಷೆ ಸಂದರ್ಭ ಒಂದು ದಿನದ ಮಗು ಎಂಬುದು ಗೊತ್ತಾಗಿದೆ. ಉಳ್ಳಾಲ ಪೊಲೀಸರು ವಿವಿಧ ಆಸ್ಪತ್ರೆಗಳಿಂದ ಮಾಹಿತಿ ಕಲೆಹಾಕುತ್ತಿದ್ದಾರೆ.
ಸದ್ಯ ಮಗುವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿರುತ್ತದೆ. ಪೊಲೀಸರು ವಿಚಾರಣೆ ಕೈಗೆತ್ತಿಕೊಂಡಿದ್ದಾರೆ ಪತ್ರಿಕಾ ಹೇಳಿಕೆಯನ್ನು ಪ್ರಕಟಿಸಿದ ನಂತರ ಹೆತ್ತವರು ಅಥವಾ ಸಂಬಂಧಿಕರು ಬಂದು ಎರಡು ತಿಂಗಳ ಒಳಗೆ ವಿಚಾರಿಸಿದಲ್ಲಿ ಅವರ ಸುಪರ್ದಿಗೆ ನೀಡಲಾಗುವುದು ಎಂದು ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶಕರು ತಿಳಿಸಿದ್ದಾರೆ.
ಮಂಗಳೂರು: ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಬಂಧನ – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…