ಉಳ್ಳಾಲ: ಒಂದೇ ಧಿಕ್ಕಿನಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಥಾರ್ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಮುಂಬದಿ ಚಲಿಸುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದು, ಸವಾರ ಡಿವೈಡರ್ ಗೆ ಬಡಿದು ಸಾವನ್ನಪ್ಪಿದ ಘಟನೆ ರಾ.ಹೆ66 ರ ಕೊಲ್ಯ ಬ್ರಹ್ಮಶ್ರೀ ಮಂದಿರ ಎದುರುಗಡೆ ಇಂದು ಮಧ್ಯಾಹ್ನ ಸಂಭವಿಸಿದೆ. ಜೀಪಿನಲ್ಲಿದ್ದ ಯುವಕರು ಗಾಂಜಾ ನಶೆಯಲ್ಲಿದ್ದು, ಅವರ ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸಿ ಸ್ಥಳೀಯರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕೊಲ್ಯ ನಿವಾಸಿ ಸಂತೋಷ್ ಬೆಳ್ಚಾಡ ( 45) ಮೃತರು. ಬಾಳೆಹಣ್ಣು ವ್ಯಾಪಾರಿಯಾಗಿದ್ದ ಅವರು ಕೆಲಸ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ಮಂಗಳೂರು ಕಡೆಯಿಂದ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯಲ್ಲಿದ್ದ ಜೀಪ್ ಎದುರಿನಲ್ಲಿ ಧರ್ಮಸ್ಥಳದಿಂದ ಕಾಞಂಗಾಡ್ ಗೆ ಕುಟುಂಬ ಸಮೇತರಾಗಿ ತೆರಳುತ್ತಿದ್ದ ಬಲೇನೋ ಕಾರಿನ ಮುಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಆಯತಪ್ಪಿದ ಕಾರು ಎದುರಿನಲ್ಲಿ ಬೈಕಿನಲ್ಲಿ ತೆರಳುತ್ತಿದ್ದ ಬೈಕ್ ಹಿಂಬದಿಗೆ ಢಿಕ್ಕಿ ಹೊಡೆದಿದೆ. ಬೈಕ್ ಡಿವೈಡರ್ ಗೆ ಬಡಿದ ಪರಿಣಾಮ ಸಂತೋಷ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ತೆರಳುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ವಿವಾಹಿತರಾಗಿದ್ದ ಸಂತೋಷ್ ಹೆತ್ತವರು, ಇಬ್ಬರು ಹೆಣ್ಮಕ್ಕಳು ಹಾಗೂ ಪತ್ನಿ ಇರುವ ಕುಟುಂಬದ ಆಧಾರಸ್ತಂಭವಾಗಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…