ಉಳ್ಳಾಲ: ಸ್ಯಾಂಡಲ್ ವುಡ್ ಡಿಂಪಲ್ ಬೆಡಗಿ ರಚಿತಾ ರಾಮ್ ಅವರಿಂದು ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿತಳಕ್ಕೆ ಭೇಟಿ ನೀಡಿ ತಮ್ಮ ನಟನೆಯ ಹೊಸ ಚಿತ್ರಗಳಾದ ʼಮ್ಯಾಟ್ನಿʼ,ʼಬ್ಯಾಡ್ ಮ್ಯಾನರ್ಸ್ʼ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದರು. ಹಾಗಾಗಿ ನನಗೂ ಇಲ್ಲಿಗೆ ಬರಬೇಕು ಅನ್ನಿಸಿತು ಬಂದ್ಬಿಟ್ಟೆ. ಕೊರಗಜ್ಜನ ಕ್ಷೇತ್ರವು ಪ್ರಾಕೃತಿಕ ಸೌಂದರ್ಯವನ್ನೊಳಗೊಂಡಿದ್ದು ತುಂಬಾ ಚೆನ್ನಾಗಿದೆ. ಮುಂದಿನ ಜೂನ್ ತಿಂಗಳಲ್ಲಿ ತೆರೆ ಕಾಣಲಿರುವ ʼಮ್ಯಾಟ್ನಿʼ ಮತ್ತು ʼಬ್ಯಾಡ್ ಮ್ಯಾನರ್ಸ್ʼ ಚಿತ್ರಗಳು ಯಶಸ್ಸು ಕಾಣಲಿ ಎಂದು ಕೊರಗಜ್ಜನಲ್ಲಿ ಪ್ರಾರ್ಥಿಸಿದೆ ಎಂದು ರಚಿತಾ ರಾಮ್ ಹೇಳಿದರು.
ಕೊರಗಜ್ಜನ ಆದಿ ಕ್ಷೇತ್ರದ ವತಿಯಿಂದ ರಚಿತಾ ರಾಮ್ ಅವರನ್ನು ಶಾಲು ಹೊದಿಸಿ ಅಭಿನಂದಿಸಲಾಯಿತು.
ಎ.ಜೆ ಆಸ್ಪತ್ರೆ ಮುಖ್ಯಸ್ಥರಾದ ಡಾ. ಪ್ರಶಾಂತ್ ಶೆಟ್ಟಿ ಮಾರ್ಲ,ಆಶ್ರಿತಾ ಶೆಟ್ಟಿ, ಹೊಟೇಲ್ ಫುಡ್ ಲ್ಯಾಂಡ್ಸ್ ಮಾಲೀಕ ಆಶೀಶ್ ಶೆಟ್ಟಿ,ಮಾಗಣ್ತಡಿ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಜಯರಾಮ್ ಭಂಡಾರಿ ,ಟ್ರಸ್ಟಿಗಳಾದ ಮಹಾಬಲ್ ಹೆಗ್ಡೆ ,ಪ್ರೀತಮ್ ಶೆಟ್ಟಿ,ಮಾಗಣ್ತಡಿ ಕುಟುಂಬದ ಜಗನ್ನಾಥ್ ಶೆಟ್ಟಿ, ಸ್ವಾತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…