Featured

ಉಳ್ಳಾಲ: ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಹೊಸ ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ – Vishwanews24

ಉಳ್ಳಾಲ: ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಹೊಸ ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

ಉಳ್ಳಾಲ: ಸ್ಯಾಂಡಲ್ ವುಡ್ ಡಿಂಪಲ್ ಬೆಡಗಿ ರಚಿತಾ ರಾಮ್ ಅವರಿಂದು ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿತಳಕ್ಕೆ ಭೇಟಿ ನೀಡಿ ತಮ್ಮ ನಟನೆಯ ಹೊಸ ಚಿತ್ರಗಳಾದ ʼಮ್ಯಾಟ್ನಿʼ,ʼಬ್ಯಾಡ್ ಮ್ಯಾನರ್ಸ್ʼ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದರು. ಹಾಗಾಗಿ ನನಗೂ ಇಲ್ಲಿಗೆ ಬರಬೇಕು ಅನ್ನಿಸಿತು ಬಂದ್ಬಿಟ್ಟೆ. ಕೊರಗಜ್ಜನ‌ ಕ್ಷೇತ್ರವು ಪ್ರಾಕೃತಿಕ ಸೌಂದರ್ಯವನ್ನೊಳಗೊಂಡಿದ್ದು ತುಂಬಾ ಚೆನ್ನಾಗಿದೆ. ಮುಂದಿನ ಜೂನ್ ತಿಂಗಳಲ್ಲಿ ತೆರೆ ಕಾಣಲಿರುವ ʼಮ್ಯಾಟ್ನಿʼ ಮತ್ತು ʼಬ್ಯಾಡ್ ಮ್ಯಾನರ್ಸ್ʼ ಚಿತ್ರಗಳು ಯಶಸ್ಸು ಕಾಣಲಿ ಎಂದು ಕೊರಗಜ್ಜನಲ್ಲಿ ಪ್ರಾರ್ಥಿಸಿದೆ ಎಂದು ರಚಿತಾ ರಾಮ್ ಹೇಳಿದರು.

ಕೊರಗಜ್ಜನ ಆದಿ ಕ್ಷೇತ್ರದ ವತಿಯಿಂದ ರಚಿತಾ ರಾಮ್ ಅವರನ್ನು ಶಾಲು ಹೊದಿಸಿ ಅಭಿನಂದಿಸಲಾಯಿತು.

ಎ.ಜೆ ಆಸ್ಪತ್ರೆ ಮುಖ್ಯಸ್ಥರಾದ ಡಾ. ಪ್ರಶಾಂತ್ ಶೆಟ್ಟಿ ಮಾರ್ಲ,ಆಶ್ರಿತಾ ಶೆಟ್ಟಿ, ಹೊಟೇಲ್ ಫುಡ್ ಲ್ಯಾಂಡ್ಸ್ ಮಾಲೀಕ ಆಶೀಶ್ ಶೆಟ್ಟಿ,ಮಾಗಣ್ತಡಿ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಜಯರಾಮ್ ಭಂಡಾರಿ ,ಟ್ರಸ್ಟಿಗಳಾದ ಮಹಾಬಲ್ ಹೆಗ್ಡೆ ,ಪ್ರೀತಮ್ ಶೆಟ್ಟಿ,ಮಾಗಣ್ತಡಿ ಕುಟುಂಬದ ಜಗನ್ನಾಥ್ ಶೆಟ್ಟಿ, ಸ್ವಾತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

19 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

1 hour ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago