Featured

ಉಳ್ಳಾಲ:  ಕೆಟ್ಟು ನಿಂತಿದ್ದ ಲಾರಿಗೆ ಎರಡು ಸ್ಕೂಟರ್ ಡಿಕ್ಕಿ : ಓರ್ವ ಸವಾರ ಮೃತ್ಯು – Vishwanews24

ಉಳ್ಳಾಲ:  ಕೆಟ್ಟು ನಿಂತಿದ್ದ ಲಾರಿಗೆ ಎರಡು ಸ್ಕೂಟರ್ ಡಿಕ್ಕಿ : ಓರ್ವ ಸವಾರ ಮೃತ್ಯು

ಉಳ್ಳಾಲ: ಕೆಟ್ಟು ನಿಂತಿದ್ದ ಲಾರಿಗೆ ಎರಡು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸಾವನಪ್ಪಿರುವ ಘಟನೆ ನೇತ್ರಾವತಿ ಸೇತುವೆ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಈ ಅಪಘಾತದಲ್ಲಿ ಅಂಗರಗುಂಡಿಯ ನಿವಾಸಿ ಮುಹಮ್ಮದ್ ನೌಫಾಲ್ (26) ಮೃತಪಟ್ಟಿದ್ದರೆ, ಸಹಸವಾರ ಉಮರ್ ಫಾರೂಕ್ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ನೌಫಾಲ್ ಬೈಕಂಪಾಡಿಯ ಎಪಿಎಂಸಿಯಲ್ಲಿ ತರಕಾರಿ ಅಂಗಡಿ ಹೊಂದಿದ್ದರು. ದಿನನಿತ್ಯ ಟೆಂಪೊದಲ್ಲಿ ಕಲ್ಲಾಪಿಗೆ ಬರುವ ನೌಫಾಲ್ ಇಂದು  ಸ್ಕೂಟರಲ್ಲಿ ತರಕಾರಿ ಕೊಂಡೊಯ್ಯಲು ಬಂದಿದ್ದರು ಎನ್ನಲಾಗಿದೆ.

ಇಬ್ಬರೂ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ತರಕಾರಿ ವ್ಯಾಪಾರದ ಹಿನ್ನೆಲೆಯಲ್ಲಿ ಪಂಪ್ ವೆಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಸಂದರ್ಭ ವೇಳೆ ಈ ಅಪಘಾತ ಸಂಭವಿಸಿದೆ. ಒಂದು ಸ್ಕೂಟರ್ ಢಿಕ್ಕಿ ಹೊಡೆದ ಕೆಲವೇ ನಿಮಿಷಗಳಲ್ಲಿ ಇನ್ನೊಂದು ಸ್ಕೂಟರ್ ಕೂಡ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

11 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

11 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

13 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

13 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

13 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

14 hours ago