Featured

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ

ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ತಾಲೂಕಿನ ಕೆರೆಬೈಲ್ ಗುಡ್ಡೆ ಪ್ರದೇಶದಲ್ಲಿ ಭೀಕರ ಅವಘಡವೊಂದು ಬುಧವಾರ (ಜು.01) ರಂದು ಸಂಭವಿಸಿದೆ.

ಗುಡ್ಡದ ತುದಿಯಲ್ಲಿದ್ದ ಖಾಸಗಿ ಗೆಸ್ಟ್ ಹೌಸ್‌ನ ಕಾಂಪೌಂಡ್ ಹಾಲ್ ಕುಸಿದು ಕೆಳಗಿದ್ದ ಮನೆಯ ಮೇಲೆ ಬಿದ್ದ ಪರಿಣಾಮ, ಮನೆ ಸಂಪೂರ್ಣವಾಗಿ ಹಾನಿಗೀಡಾಗಿದೆ. ಆದರೆ, ಅದೃಷ್ಟವಶಾತ್ ಮನೆಯಲ್ಲಿದ್ದ ಕುಟುಂಬದ ಸದಸ್ಯರು ವಾರದ ಹಿಂದಷ್ಟೇ ಸಂಬಂಧಿಕರ ಮನೆಗೆ ಸ್ಥಳಾಂತರಗೊಂಡಿದ್ದರಿಂದ ದೊಡ್ಡದೊಂದು ಪ್ರಾಣಾಪಾಯ ಪವಾಡ ಸದೃಶವಾಗಿ ತಪ್ಪಿದೆ.

ಕೆರೆಬೈಲ್ ನಿವಾಸಿ ಕಿಶೋರ್ ಅವರ ಮನೆ ಹಾನಿಗೀಡಾಗಿದ್ದು, ಕೆರೆಬೈಲು ಗುಡ್ಡೆ ಪ್ರದೇಶದಲ್ಲಿ ಸುಮಾರು 40 ಕ್ಕೂ ಹೆಚ್ಚು ಮನೆಗಳು ಇದ್ದು ಗುಡ್ಡದ ತುತ್ತ ತುದಿಯಲ್ಲಿ ಮಂಗಳೂರಿನ ಸಂಸ್ಥೆಯೊಂದಕ್ಕೆ ಸೇರಿದ ಗೆಸ್ಟ್ ಹೌಸ್ ಇದ್ದು, ಈ ಮನೆಯ ಆವರಣ ಗೋಡೆ ಕುಸಿದು ದುರಂತ ಸಂಭವಿಸಿದೆ.

ವಾರದ ಹಿಂದೆ ಸ್ಥಳಾಂತರಗೊಂಡಿದ್ದರು : ಕಿಶೋರ್ ಅವರ ಮನೆಯ ಮೇಲೆಯಿದ್ದ ಆವರಣಗೋಡೆಯಲ್ಲಿ ಬಿರುಕು ಬಿದ್ದ ಹಿನ್ನಲೆಯಲ್ಲಿ ವಾರದ ಹಿಂದೆ ತಮ್ಮ ಸಂಬಂಧಿಕರ ಮನೆಗೆ ಸ್ಥಳಾಂತರಗೊಂಡಿದ್ದರು. ಕಳೆದ ಬಾರಿ ಮಳೆಗಾಲದಲ್ಲಿ ಈ ಆವರಣ ಗೋಡೆ ಬಿರುಕು ಬಿದ್ದ ಸಂದರ್ಭದಲ್ಲಿ ಮಳೆಗಾಲದಲ್ಲಿ ಬಾಡಿಗೆ ಮನೆಗೆ ಈ ಕುಟುಂಬ ಸ್ಥಳಾಂತರಗೊಂಡಿತ್ತು. ಮಳೆ ಕಳೆದ ಬಳಿಕ ವಾಪಾಸ್ ನೆಲೆಸಿದ್ದು, ಈ ಬಾರಿಯ ಮಳೆಗಾಲದ ಹಿನ್ನಲೆಯಲ್ಲಿ ಸ್ಥಳಾಂತರಗೊಂಡಿದ್ದರಿಂದ ದೊಡ್ಡದೊಂದು ಅವಘಡ ತಪ್ಪಿದಂತಾಗಿದೆ.

ಅಪಾಯದಲ್ಲಿ ಹಲವಾರು ಮನೆಗಳು: ಮಂಗಳೂರಿನ ಸಂಸ್ಥೆಗೆ ಸೇರಿದ ಈ ಗೆಸ್ಟ್ ಹೌಸ್ ಸುತ್ತ ಎತ್ತರದ ಆವರಣ ಗೋಡೆ ಹಾಕಿದ್ದು, ಕಳೆದ ನಾಲ್ಕೆದು ವರುಷಗಳಿಂದ ಈ ಸಮಸ್ಯೆ ಉದ್ಭವಿಸಿದೆ. ಸ್ಥಳೀಯ ನಿವಾಸಿಗಳು ಕಳೆದ 40 ವರುಷಗಳಿಂದ ಇಲ್ಲಿ ವಾಸಿಸುತ್ತಿದ್ದು, ಆವರಣ ಗೋಡೆ ನಿರ್ಮಾಣವಾದ ಬಳಿಕ ಈ ಸಮಸ್ಯೆ ಉದ್ಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಇನ್ನಷ್ಟು ಆವರಣಗೋಡೆ ಕುಸಿಯುವ ಮೊದಲು ಆವರಣಗೋಡೆಯನ್ನು ವೈಜ್ಞಾನಿಕವಾಗಿ ನಿರ್ಮಿಸಿ ಶಾಶ್ವತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

2 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

5 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

6 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

6 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

6 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

6 hours ago