ಉಳ್ಳಾಲ: ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದರೂ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು ಕೊಲೆ ಸಂಶಯ ವ್ಯಕ್ತಪಡಿಸಿದೆ.
ಛತ್ತೀಸಗಢ ಮೂಲದ ಸರಿತಾ ವರ್ಮ(23) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ. ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ಸರಿತಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಜ.30 ರಂದು ಸಂಜೆ ಪ್ರಕರಣ ಬೆಳಕಿಗೆ ಬಂದಿತ್ತು. ಘಟನೆ ವೇಳೆ ಸಹೋದರರಿಬ್ಬರು ಕೆಲಸಕ್ಕೆ ತೆರಳಿದ್ದರೆ, ಅತ್ತಿಗೆ ಆಸ್ಪತ್ರೆಗೆ ತೆರಳಿದ್ದರು. ಬಾಡಿಗೆ ಮನೆ ಮಾಲೀಕರು ವೃದ್ದರಾಗಿದ್ದು ಅಸೌಖ್ಯದಿಂದಿದ್ದಾರೆ. ಕೆಳಗಿನ ಅಂತಸ್ತಿನಲ್ಲಿ ಮಾಲೀಕರಿದ್ದರೆ, ಮೇಲಿನ ಅಂತಸ್ತಿನಲ್ಲಿ ಬಾಡಿಗೆ ಕುಟುಂಬ ವಾಸ್ತವ್ಯವಿತ್ತು. ಸರಿತಾ ವರ್ಮ ವಿಶೇಷ ಚೇತನರಾಗಿದ್ದು, ಬಾಯಿ ಮತ್ತು ಕಿವಿ ಕೇಳದ ಸ್ಥಿತಿಯಲ್ಲಿದ್ದರು.
ಸಾವಿನಲ್ಲಿ ಸಂಶಯ: ಸರಿತಾ ಬಾಯಿಗೆ ಬಟ್ಟೆಯನ್ನು ಬಿಗಿಯಾಗಿ ಕಟ್ಟಲಾಗಿದೆ. ಇದು ಸಂಶಯಕ್ಕೆ ಕಾರಣವಾಗಿದ್ದು, ಹತ್ಯೆ ನಡೆಸಿದ ಬಳಿಕ ಯುವತಿಯನ್ನು ನೇಣುಹಾಕಿದರೆ ಅನ್ನುವ ಸಂಶಯವನ್ನು ಉಳ್ಳಾಲ ಪೊಲೀಸರು ವ್ಯಕ್ತಪಡಿಸಿದ್ದಾರೆ. ಕೆಳಗಿನ ಮನೆಯಲ್ಲಿರುವ ವೃದ್ದ ಮಾಲೀಕರಿಗೆ ಯುವಕನೋರ್ವ ಮಧ್ಯಾಹ್ನ ಹಾಗೂ ರಾತ್ರಿ ಊಟ ತರುತ್ತಾನೆ. ಸರಿತಾ ವರ್ಮ ಮೃತದೇಹ ಪತ್ತೆಯಾದ ದಿನದಂದು ಆತ ಮಾತ್ರ ಕಂಪೌಂಡ್ ಪ್ರವೇಶಿಸಿರುವ ಕುರಿತು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಯುಡಿಆರ್ ದಾಖಲಿಸಿರುವ ಪೊಲೀಸರು ಸಂಶಯಾಸ್ಪದರನ್ನು ಠಾಣೆಗೆ ಕರೆಸಿ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…