ಉಳ್ಳಾಲ: ಕೋಟೆಕಾರ್ನ ರಾಷ್ಟ್ರೀಕೃತ ಬ್ಯಾಂಕೊಂದರ ಲಾಕರ್ನಲ್ಲಿ ಗ್ರಾಹಕರು ಇಟ್ಟಿದ್ದ 8 ಲಕ್ಷ ರೂ. ಗೆದ್ದಲು ಪಾಲಾಗಿದೆ. ಇದಕ್ಕೆ ಬ್ಯಾಂಕಿನ ನಿರ್ವಹಣೆ ಕೊರತೆಯೇ ಕಾರಣ ಎಂದು ಹಣ ಕಳೆದುಕೊಂಡ ಗ್ರಾಹಕರು ಆರೋಪಿಸಿದ್ದಾರೆ.
ಆದರೆ ಅತ್ತ ಬ್ಯಾಂಕ್ ನವರು ಜವಾಬ್ದಾರಿಯಿಂದ ನುಣಿಚಿಕೊಳ್ಳುತ್ತಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಇದು ನಮಗೆ ಸಂಬಂಧಪಟ್ಟ ವಿಷಯವಲ್ಲ ಎಂದು ಬ್ಯಾಂಕಿನವರು ಹೇಳಿದ್ದಾರೆ. ಆರ್ಬಿಐ ನಿಯಮ ಪ್ರಕಾರ ಲಾಕರ್ನಲ್ಲಿ ಹಣ ಇರಿಸುವಂತಿಲ್ಲ. ಆದ್ದರಿಂದ ಹಣ ಗೆದ್ದಲು ಪಾಲಾಗಿರುವುದು ನಮಗೆ ಸಂಬಂಧಿಸಿದ ವಿಷಯವಲ್ಲ ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.
ಹಣ ಕಳೆದುಕೊಂಡವರು ಈ ಸಂಬಂಧ ಬೆಂಗಳೂರಿನ ಪ್ರಧಾನ ಕಚೇರಿಗೆ ದೂರು ನೀಡಿದ್ದು, ಹಳೆಯ ಕಟ್ಟಡ ನಿರ್ವಹಣೆ ಕೊರತೆಯಿಂದ ಸಮಸ್ಯೆಯಾಗಿದ್ದು, ಅದನ್ನು ಸರಿಪಡಿಸಬೇಕು ಎಂದು ಮನವಿ ಮಾಡಿದ್ದಾರೆ. 6 ತಿಂಗಳ ಹಿಂದೆ ಲಾಕರ್ನಲ್ಲಿ ಕುಟುಂಬವೊಂದು ಹಣ ಇರಿಸಿತ್ತು. ಈಗ ಅಗತ್ಯ ಉದ್ದೇಶಕ್ಕಾಗಿ ಬಳಸಲು ದುಡ್ಡು ತೆಗೆದುಕೊಂಡು ಬರಲು ಹೋಗಿದ್ದಾಗ ಎಲ್ಲ ಹಣವನ್ನೂ ಗೆದ್ದಲು ಚೂರುಚೂರು ಮಾಡಿದೆ. ಲಾಕರ್ ಮಳೆನೀರಿನಲ್ಲಿ ನೆನೆದ ಸ್ಥಿತಿಯಲ್ಲಿದ್ದು, ದುಡ್ಡು ಸಂಪೂರ್ಣ ಕಪ್ಪಾಗಿ ಹುಡಿ ಹುಡಿಯಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…