Featured

ಉಳ್ಳಾಲ : ಕೋಟೆಕಾರ್ ಅಜ್ಜನ ಕಟ್ಟೆಯಿಂದ ಕಳವಾದ ಬೈಕ್ : ಎರಡು ದಿನಗಳ ಒಳಗೆ ಬೈಕ್ ಪತ್ತೆ :- ಕಾರಣಿಕ ಮೆರೆದ ಕೊರಗಜ್ಜ – VIshwanews24

ಉಳ್ಳಾಲ ಕೋಟೆಕಾರ್ ಅಜ್ಜನ ಕಟ್ಟೆಯಿಂದ ಕಳವಾದ ಬೈಕ್ : ಎರಡು ದಿನಗಳ ಒಳಗೆ ಬೈಕ್ ಪತ್ತೆ – ಕಾರಣಿಕ ಮೆರೆದ ಕೊರಗಜ್ಜ

ಬೈಕ್ ಕಳವಾದ ಕುರಿತು ಕೊರಗಜ್ಜನ ಕಟ್ಟೆ ಎದುರುಗಡೆ ರಾಜೇಶ್ ಸೇರಿದಂತೆ ಹಲವರು ಕಳ್ಳನ ಪತ್ತೆಯಾಗುವಂತೆ ಸಾಮೂಹಿಕ ಪ್ರಾರ್ಥನೆ ನಡೆಸಿದ್ದರು.

ಉಳ್ಳಾಲ: ಉಳ್ಳಾಲ ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿಯಿಂದ ಕಳವು ನಡೆಸಿದ್ದ ಬೈಕ್ ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಬೈಕ್ ಮಾಲೀಕರ ಸ್ನೇಹಿತರೊಬ್ಬರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬೈಕ್ ಸಮೇತ ಪಾಂಡೇಶ್ವರ ಠಾಣಾ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಾ.28ರ ನಸುಕಿನ ಜಾವ ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿ ಒಳರಸ್ತೆಯಲ್ಲಿ ನಿಲ್ಲಿಸಿದ್ದ ರಾಜೇಶ್ ಎಂಬವರಿಗೆ ಸೇರಿದ ಬೈಕನ್ನು ಕಳ್ಳರು ಕಳವು ನಡೆಸಿದ್ದರು.

ಕೃತ್ಯ ಸಿಸಿಟಿವಿಯಲ್ಲಿ ಸೆಎರಯಾಗಿದ್ದು, ಕಳ್ಳನ ಚಹರೆಯೂ ಸರಿಯಾಗಿ ಗೋಚರಿಸಿತ್ತು. ಅದೇ ದಿನದಂದು ತೊಕ್ಕೊಟ್ಟು ಕಾಂಗ್ರೆಸ್ ಕಚೇರಿ ಮುಂಭಾಗದ ಕೊರಗಜ್ಜನ ಕಟ್ಟೆ ಬಳಿ ನಿಲ್ಲಿಸಿದ್ದ ಬೈಕ್ ಕೂಡಾ ಕಳವು ನಡೆದಿತ್ತು. ಅದರ ದೃಶ್ಯ ಕೂಡಾ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಈ ಕುರಿತು ಎರಡು ಪ್ರತ್ಯೇಕ ಬೈಕ್ ಕಳವು ಪ್ರಕರಣ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಕಳವಾದ ರಾಜೇಶ್ ಸ್ನೇಹಿತ ರಫೀಕ್ ಕೆಲಸದ ನಿಮಿತ್ತ ಇಂದು ನಗರದ ಹಂಪನಕಟ್ಟೆಯ ಮಿನಿವಿಧಾನಸೌಧಕ್ಕೆ ತೆರಳಿದ್ದರು.

ಅಲ್ಲಿ ರೈಲು ನಿಲ್ದಾಣದ ರಸ್ತೆ ಬದಿಯ ಅಂಗಡಿಗೆ ತೆರಳಿದ್ದ ಸಂದರ್ಭ ಅಂಗಡಿ ಎದುರುಗಡೆ ಬೈಕ್ ನಿಂತಿತ್ತು. ಕಳವಾದ ಸ್ನೇಹಿತ ರಾಜೇಶನ ಬೈಕ್ ಎಂದು ಶಂಕೆ ವ್ಯಕ್ತಪಡಿಸಿ , ಅಲ್ಲಿದ್ದ ಯುವಕರನ್ನು ಪ್ರಶ್ನಿಸುತ್ತಿದ್ದಂತೆ, ಇಬ್ಬರು ಪರಾರಿಯಾಗಿದ್ದಾರೆ.

ಬೈಕ್ ನೋಂದಣಿ ಸಂಖ್ಯೆಯನ್ನು ಬದಲಾಯಿಸಿದ್ದ ಕಿರಾತಕರು , ಅದರಲ್ಲಿ ` ಸೋನು’ ಎಂದು ಅಂಟಿಸಲಾಗಿದ್ದ ಸ್ಟಿಕರ್ ತೆಗೆಯುವಲ್ಲಿ ವಿಫಲರಾಗಿದ್ದರು. ತಕ್ಷಣ ರಫೀಕ್ ಸ್ಥಳದಲ್ಲಿದ್ದ ಪಾಂಡೇಶ್ವರ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಅಂಗಡಿ ಸಿಸಿಟಿವಿಯ ಮಾಹಿತಿ ಪಡೆದು ಕಸಬ ಬೆಂಗ್ರೆ ಮತ್ತು ಪಡುಬಿದ್ರೆ ಮೂಲದ ಮೂವರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ.

ಬೈಕ್ ಕಳವಾದ ಕುರಿತು ಕೊರಗಜ್ಜನ ಕಟ್ಟೆ ಎದುರುಗಡೆ ರಾಜೇಶ್ ಸೇರಿದಂತೆ ಹಲವರು ಕಳ್ಳನ ಪತ್ತೆಯಾಗುವಂತೆ ಸಾಮೂಹಿಕ ಪ್ರಾರ್ಥನೆ ನಡೆಸಿದ್ದರು. ಎರಡು ದಿನಗಳ ಒಳಗೆ ಬೈಕ್ ಪತ್ತೆಯಾಗುವುದರ ಜೊತೆಗೆ ಕಳ್ಳರನ್ನು ಸೆರೆಹಿಡಿಯಲಾಗಿದೆ.

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಹಲವು ಬೈಕ್ ಗಳ ಕಳವು ಜಾಲದಲ್ಲಿ , ಪೊಲೀಸ್ ವಶದಲ್ಲಿರುವವರ ಕೈವಾಡವಿರುವ ಕುರಿತು ತನಿಖೆಯಾಗಬೇಕಿದೆ ಎಂದು ಬೈಕ್ ಕಳೆದುಕೊಂಡ ಮಾಲೀಕರು ಒತ್ತಾಯಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago