Featured

ಉಳ್ಳಾಲ : ಗ್ರಹಪ್ರವೇಶದ ದಿನ ವಾಸ್ತು ಹೋಮದ ಹೊಗೆಯ ನಡುವೆ  ಕಳ್ಳನ ಕೈಚಳಕ ; ಲಕ್ಷಾಂತರ ಮೌಲ್ಯದ ನಗ ನಗದು ಕಳ್ಳತನ – Vishwanews24

ಉಳ್ಳಾಲ : ಗ್ರಹಪ್ರವೇಶದ ದಿನ ವಾಸ್ತು ಹೋಮದ ಹೊಗೆಯ ನಡುವೆ  ಕಳ್ಳನ ಕೈಚಳಕ ; ಲಕ್ಷಾಂತರ ಮೌಲ್ಯದ ನಗ ನಗದು ಕಳ್ಳತನ

ಉಳ್ಳಾಲ :  ನೂತನ ಮನೆಯ ಗ್ರಹಪ್ರವೇಶದ ದಿನ ಕಳ್ಳನೊಬ್ಬ ವಾಸ್ತು ಹೋಮದ ಹೊಗೆಯ ನಡುವೆ ಕೈಚಳಕ ತೋರಿಸಿದ್ದಾನೆ. ಬಳಿಕ ನೆರೆಮನೆಯಲ್ಲೂ ಲಕ್ಷಾಂತರ ಮೌಲ್ಯದ ನಗ ನಗದು ಕಳ್ಳತನ ಮಾಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಾರು ಬಳಿ ನಡೆದಿದೆ.

ಡಿಸೆಂಬರ್ 10ರಂದು ರಾತ್ರಿ ಇಲ್ಲಿನ ನಿವಾಸಿಗಳಾದ ಸ್ಮಿತಾ-ದಾಮೋದರ್ ದಂಪತಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡ್ಕಬೈಲು ಎಂಬಲ್ಲಿ ತಾವು ನಿರ್ಮಿಸಿದ ನೂತನ ಮನೆಯಲ್ಲಿ ವಾಸ್ತು ಹೋಮ ನೆರವೇರಿಸಿದ್ದರು. ವಾಸ್ತು ಹೋಮ ನಡೆಯುತ್ತಿರುವಾಗಲೇ ಎಲ್ಲರ ಸಮ್ಮುಖದಲ್ಲೇ ಹೋಮದ ಹೊಗೆಯಲ್ಲಿ ಯಾರಿಗೂ ಗೊತ್ತಾಗದಂತೆ ಒಳ ನುಗ್ಗಿದ್ದ ಬರ್ಮುಡ ಧಾರಿ ಯುವಕನೋರ್ವ ಕೋಣೆಯೊಳಗೆ ನುಗ್ಗಿ ಬ್ಯಾಗಲ್ಲಿದ್ದ 15 ರೂಪಾಯಿ ನಗದು, ಮೊಬೈಲ್ ಚಾರ್ಜರ್ ಮತ್ತು ಬೆಲೆ ಬಾಳುವ ಕಾಸ್ಮೆಟಿಕ್ಸ್ ಕಳವು ನಡೆಸಿದ್ದಾನೆ. ಕಳ್ಳ ಹೋಮ ನಡೆಯುತ್ತಿದ್ದ ವೇಳೆ ಮನೆಯೊಳಗಿನ ಕೋಣೆಗೆ ನುಗ್ಗಿ ಹೊರನಡೆಯುವ ದೃಶ್ಯ ವೃತ್ತಿಪರ ಕ್ಯಾಮೆರ ಮೆನ್ ನ ವೀಡಿಯೋದಲ್ಲಿ ದಾಖಲಾಗಿದೆ.

 

ಅದೇ ದಿನ ಮಧ್ಯ ರಾತ್ರಿ ಅಲ್ಲೇ ಸಮೀಪದ ಶಿವ ಸುಬ್ರಹ್ಮಣ್ಯ ಪ್ರಸಾದ್ ಭಟ್ ಎಂಬವರ ಮನೆಗೂ ರಾತ್ರಿ ಕನ್ನ ಹಾಕಿದ್ದ ಕಳ್ಳ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲನ್ನ ಒಡೆದು ಕೋಣೆಯೊಳಗಿನ ಕಪಾಟಲ್ಲಿದ್ದ 11 ಸಾವಿರ ರೂಪಾಯಿ ನಗದು,32 ಗ್ರಾಂ ಚಿನ್ನ ,8 ಬೆಳ್ಳಿಯ ನಾಣ್ಯ,ಮತ್ತು 3 ರೇಡೋ ವಾಚ್ ಗಳು ಸೇರಿ ಒಟ್ಟು 1 ಲಕ್ಷದ 49 ಸಾವಿರ ರೂಪಾಯಿ ಮೌಲ್ಯದ ನಗ,ನಗದನ್ನ ಕದ್ದೊಯ್ದಿದ್ದಾನೆ. ಬರ್ಮುಡ ಧಾರಿ ಕಳ್ಳನ ಜತೆ ಇನ್ನೋರ್ವನು ಇದ್ದು ಇವರಿಬ್ಬರು ಡಿಸೆಂಬರ್ 10 ರಾತ್ರಿ ಕಳ್ಳತನ ನಡೆದಿದ್ದ ಪ್ರದೇಶ ಅಡ್ಕಬೈಲಿಗೆ ದ್ವಿಚಕ್ರ ವಾಹನದಲ್ಲಿ ಬರುವ ದೃಶ್ಯ ಸಿ.ಸಿಟಿವಿಯಲ್ಲಿ ಸೆರೆಯಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದು ವೀಡಿಯೋ ಫೂಟೇಜ್ ಆಧಾರದಲ್ಲಿ ಕಳ್ಳರ ಶೋಧ ಕಾರ್ಯ ನಡೆಸುತ್ತಿದ್ದಾರೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

9 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

9 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

9 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

9 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

12 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

12 hours ago