ಉಳ್ಳಾಲ : ಚಿಟ್ ಫಂಡ್ : ಹಣ ಮರಳಿಸದೆ ಮೋಸ – ಆತ್ಮಹತ್ಯೆಗೆ ಶರಣಾದ ವೃದ್ದ – Vishwnaews24

Featured, ದಕ್ಷಿಣ ಕನ್ನಡ

ಚಿಟ್ ಫಂಡ್ ಹಣ ಮರಳಿಸದೆ ಮೋಸ – ಆತ್ಮಹತ್ಯೆಗೆ ಶರಣಾದ ವೃದ್ದ

ಉಳ್ಳಾಲ : ಚಿಟ್ ಫಂಡ್ ಹಣ ಮರಳಿಸದೆ ಮೋಸ ಮಾಡಿದ್ದರಿಂದ ಬೇಸತ್ತು ವೃದ್ದರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕೋಟೆಕಾರು ಗ್ರಾಮದ ಮಾಡೂರು ಸರಕಾರಿ ಶಾಲೆಯ ಬಳಿಯ ನಿವಾಸಿ ಜಯರಾಮ ಶೆಟ್ಟಿ(71).

ಜಯರಾಮ್ ಶೆಟ್ಟಿ ಅವರು ಮಾಡೂರು ಬಸ್ಸು ತಂಗುದಾಣದ ಬಳಿಯ ಪಂಚಾಯತ್ ಕಟ್ಟಡದ ಅಂಗಡಿಯಲ್ಲಿ ಸೀಯಾಳ ವ್ಯಾಪಾರಿಯಾಗಿದ್ದು, ಚಿಟ್ ಫಂಡ್ ವ್ಯವಹಾರವನ್ನೂ ನಡೆಸುತ್ತಿದ್ದರೆನ್ನಲಾಗಿದೆ. ಇಬ್ಬರು ಫಂಡ್ ಹಣ ಮರಳಿಸದೆ ಮೋಸ ಮಾಡಿದ್ದರಿಂದ, ಜಯರಾಮ್ ಶೆಟ್ಟಿ ತೀರ ನಷ್ಟ ಅನುಭವಿಸಿದ್ದು, ಇದೇ ಚಿಂತೆಯಲ್ಲೇ ಅವರು ನೇಣು ಬಿಗಿದು ಆತ್ಮ ಹತ್ಯೆಗೈದಿರುವುದಾಗಿ ಅವರ ಪತ್ನಿ ಕೋಟೆಕಾರ್ ಗ್ರಾಪಂ ಮಾಜಿ ಸದಸ್ಯೆ ಲೀನಾ ಪೊಲೀಸರಿಗೆ ದೂರು ನೀಡಿದ್ದಾರೆ.

ಇಂದು ಬೆಳಗ್ಗೆ ಮನೆಯ ಕೋಣೆಯೊಳಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

RSS ಸಂಸ್ಥಾಪಕ ಹೆಡಗೇವಾರ್ ಪಠ್ಯ ಕೈಬಿಡುವುದಿಲ್ಲ: ಸಿಎಂ ಬೊಮ್ಮಾಯಿ – Vishwnaews24

Leave a Reply