ಉಳ್ಳಾಲ : ಚಿಟ್ ಫಂಡ್ ಹಣ ಮರಳಿಸದೆ ಮೋಸ ಮಾಡಿದ್ದರಿಂದ ಬೇಸತ್ತು ವೃದ್ದರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕೋಟೆಕಾರು ಗ್ರಾಮದ ಮಾಡೂರು ಸರಕಾರಿ ಶಾಲೆಯ ಬಳಿಯ ನಿವಾಸಿ ಜಯರಾಮ ಶೆಟ್ಟಿ(71).
ಜಯರಾಮ್ ಶೆಟ್ಟಿ ಅವರು ಮಾಡೂರು ಬಸ್ಸು ತಂಗುದಾಣದ ಬಳಿಯ ಪಂಚಾಯತ್ ಕಟ್ಟಡದ ಅಂಗಡಿಯಲ್ಲಿ ಸೀಯಾಳ ವ್ಯಾಪಾರಿಯಾಗಿದ್ದು, ಚಿಟ್ ಫಂಡ್ ವ್ಯವಹಾರವನ್ನೂ ನಡೆಸುತ್ತಿದ್ದರೆನ್ನಲಾಗಿದೆ. ಇಬ್ಬರು ಫಂಡ್ ಹಣ ಮರಳಿಸದೆ ಮೋಸ ಮಾಡಿದ್ದರಿಂದ, ಜಯರಾಮ್ ಶೆಟ್ಟಿ ತೀರ ನಷ್ಟ ಅನುಭವಿಸಿದ್ದು, ಇದೇ ಚಿಂತೆಯಲ್ಲೇ ಅವರು ನೇಣು ಬಿಗಿದು ಆತ್ಮ ಹತ್ಯೆಗೈದಿರುವುದಾಗಿ ಅವರ ಪತ್ನಿ ಕೋಟೆಕಾರ್ ಗ್ರಾಪಂ ಮಾಜಿ ಸದಸ್ಯೆ ಲೀನಾ ಪೊಲೀಸರಿಗೆ ದೂರು ನೀಡಿದ್ದಾರೆ.
ಇಂದು ಬೆಳಗ್ಗೆ ಮನೆಯ ಕೋಣೆಯೊಳಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…