Featured

ಉಳ್ಳಾಲ : ಚೂರಿಯಿಂದ ಇರಿದು ಮಹಿಳೆಯ ಬರ್ಬರ ಹತ್ಯೆ – Vishwanews24

ಉಳ್ಳಾಲ : ಚೂರಿಯಿಂದ ಇರಿದು ಮಹಿಳೆಯ ಬರ್ಬರ ಹತ್ಯೆ

ಉಳ್ಳಾಲ  : ಇಲ್ಲಿನ ಕೋಟೆಪುರ ಬಸ್ ನಿಲ್ದಾಣದ ಸಮೀಪ ಮಹಿಳೆಯನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ನಿನ್ನೆ ಸಂಜೆ ನಡೆದಿದೆ.

ದೆಹಲಿ ಮೂಲದ 35-40 ವರ್ಷದ ಮಹಿಳೆಯ ಹತ್ಯೆ ನಡೆದಿದೆ. ಘಟನೆ ಬಳಿಕ ಈಕೆ ಜತೆಗಿದ್ದ ವ್ಯಕ್ತಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.

ಎರಡು ದಿನಗಳ ಹಿಂದೆ ಕೋಟೆಪುರಕ್ಕೆ ಬಂದಿದ್ದ ಜೋಡಿ, ಸ್ಥಳೀಯ ಸೆಲೂನ್ ಮಾಲೀಕರ ಮೂಲಕ ಬಾಡಿಗೆ ಮನೆಯನ್ನು ಪಡೆದುಕೊಂಡಿದ್ದರು. ಮನೆಗೆ ಬರುವಾಗ ಬಟ್ಟೆ ವ್ಯಾಪಾರ ನಡೆಸುವವರು ಎಂದು ತಿಳಿಸಿದ್ದು, ಇನ್ನೇನು ಬಟ್ಟೆಗಳು ಬರಬೇಕಿದೆ ಎಂದು ತಿಳಿಸಿ ಮನೆಯಲ್ಲಿದ್ದರು. ಇಂದು ಸಂಜೆ ವೇಳೆ ಇಬ್ಬರೂ ಮನೆಯಿಂದ ಹೊರಬಾರದೇ ಇರುವುದನ್ನು ಗಮನಿಸಿ ಯುವಕನೋರ್ವ ಮನೆಯನ್ನು ಗಮನಿಸಿದಾಗ ಶೌಚಾಲಯದೊಳಗೆ ಮಹಿಳೆಯ ಮೃತದೇಹ ಚೂರಿಯಿಂದ ಇರಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಶೌಚಾಲಯದೊಳಕ್ಕೆ ಮಹಿಳೆ ಮೃತದೇಹ ಚೂರಿಯಿಂದ ಇರಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಬೆರಳಚ್ಚು ತಜ್ಞರು, ಫಾರೆನ್ಸಿಕ್ ವಿಭಾಗ, ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

14 minutes ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

1 hour ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

2 hours ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

2 hours ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

2 hours ago