Featured

ಉಳ್ಳಾಲ : ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ – vishwanews24

ಉಳ್ಳಾಲ : ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ

ಮಂಗಳೂರು : ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಕಡಪ್ಪರ ಸಮೀರ್ ಎಂಬಾತನನ್ನು ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ತಂಡವೊಂದು ಬರ್ಬರವಾಗಿ ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ.

ರಾತ್ರಿ 10ರ ಸುಮಾರಿಗೆ ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಹಿಂಬದಿಯಿಂದ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ. ಅಪಾಯವನ್ನು ಅರಿತ ಸಮೀರ್ ತಕ್ಷಣ ಸ್ಥಳದಿಂದ ಓಡಲು ಯತ್ನಿಸಿ, ಈ ವೇಳೆ ಅಟ್ಟಾಡಿಸಿದ ಐದು ಮಂದಿಯ ತಂಡ ಕಲ್ಲಾಪು ಜಂಕ್ಷನ್ನಿನಿಂದ 500 ಮೀ ದೂರದಲ್ಲಿರುವ ವಿ.ಕೆ.ಫರ್ನಿಚರ್ ಹಿಂಭಾಗದವರೆಗೂ ಅಟ್ಟಾಡಿಸಿ, ಅಲ್ಲಿ ತಲವಾರಿನಿಂದ ಕಡಿದು ಹತ್ಯೆ ನಡೆಸಿದೆ.

2018 ರಲ್ಲಿ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ನನ್ನು ಜೆಪ್ಪುವಿನ ಫ್ಲಾಟ್‍ವೊಂದರಲ್ಲಿ ದಾವುದ್, ಶಮೀರ್, ರಿಯಾಝ್, ನಮೀರ್ , ಅಬ್ದುಲ್ ಖಾದರ್, ಉಮ್ಮರ್ ನವಾಫ್, ಮೊಹಮ್ಮದ್ ನಝೀರ್, ನೌಷಾದ್, ಅಝ್ಗರ್ ಆಲಿ ಎಂಬವರು ಸೇರಿಕೊಂಡು ಹತ್ಯೆ ನಡೆಸಿದ್ದರು. ಪ್ರಕರಣದಲ್ಲಿ ಶಮೀರ್ ಎರಡನೇ ಆರೋಪಿಯಾಗಿದ್ದು, ದಾವುದ್ ಮತ್ತು ಶಮೀರ್ ಇಬ್ಬರು ನೇರವಾಗಿ ಫ್ಲ್ಯಾಟ್ ಪ್ರವೇಶಿಸಿ ಇಲ್ಯಾಸ್ ನನ್ನು ಹತ್ಯೆ ನಡೆಸಿರುವುದು ತನಿಖೆಯಲ್ಲಿ ಬಯಲಾಗಿತ್ತು. ಪ್ರಕರಣ ಸಂಬಂಧ ಜೈಲುಪಾಲಾದ ಶಮೀರ್ ಕೆಲ ದಿನಗಳ ಹಿಂದಷ್ಟೇ ಬಿಡುಗಡೆಗೊಂಡಿದ್ದ.

ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

4 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

4 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

4 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

5 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago