ಉಳ್ಳಾಲ: ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ನರ ಚಚ್೯ ಬಳಿ ಇಂದು ಬೆಳಿಗ್ಗೆ ನಡೆದಿದೆ.
ತೊಕ್ಕೊಟ್ಟು, ಕೃಷ್ಣ ನಗರ ಲಚ್ಚಿಲ್ ನಿವಾಸಿ 62 ವರ್ಷದ ನಾಗೇಶ್ (62) ಆತ್ಮ ಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ.
ನಾಗೇಶ್ ಅವರು ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು.
ಟೆಂಪೋವನ್ನು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ದಿನನಿತ್ಯವೂ ರಾತ್ರಿ ನಿಲ್ಲಿಸುತ್ತಿದ್ದರು.
ಇಂದು ಬೆಳಿಗ್ಗೆ ನಾಗೇಶ್ ಅವರು ಟೆಂಪೋ ತೆಗೆಯದೆ ನಾಪತ್ತೆಯಾಗಿದ್ದು, ಸಂಪರ್ಕಕ್ಕೆ ಸಿಕ್ಕಿರಲಿಲ್ಲ.
ಟೆಂಪೋ ಸೀಟ್ ನಲ್ಲಿ ನಾಗೇಶ್ ಅವರ ಮೊಬೈಲ್, ನಗದು, ಫೋಟೊ, ಚಪ್ಪಲಿ ದೊರಕಿದ್ದು, ಅನುಮಾನಗೊಂಡ ಮನೆ ಮಂದಿ, ಸ್ಥಳೀಯರು ಬಾವಿಯಲ್ಲಿ ಹುಡುಕಾಟ ನಡೆಸಿದ್ದಾರೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬಾವಿಯಲ್ಲಿ ನಾಗೇಶ್ ಅವರ ದೇಹವಿರುವುದು ಖಾತ್ರಿ ಪಡಿಸಿ ಮೃತ ದೇಹವನ್ನ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿತ್ತು.
ಮರಣೋತ್ತರ ಪರೀಕ್ಷೆಯ ಬಳಿಕ ಅವರ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಯಿತು.
ನಾಗೇಶ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಅವರು ತೊಕ್ಕೊಟ್ಟು ನಿತ್ಯಾನಂದ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿದ್ದರು ಎಂದು ತಿಳಿದು ಬಂದಿದೆ.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…