ಉಳ್ಳಾಲ: ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದಾಗ ತನ್ನ ಮೇಲೆ ಮೂವರು ತಲವಾರು ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ಕೆ.ಸಿ.ರೋಡ್ ನಿವಾಸಿ ಕಿಶೋರ್ (48) ಎಂಬುವರು ದೂರು ಹೇಳಿಕೊಂಡಿದ್ದು, ಪೊಲೀಸರು ತನಿಖೆ ನಡೆಸಿದಾಗ ಇಂತಹ ಯಾವುದೇ ಪ್ರಕರಣ ನಡೆಯದೇ ಇರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ದೂರುದಾರನ ವಿರುದ್ಧವೇ ಪ್ರಕರಣ ದಾಖಲಾಗಿದೆ.
ತನ್ನ ಮೇಲೆ ಹಲ್ಲೆ ಮೂವರು ತಲವಾರು ದಾಳಿ ನಡೆಸಲು ಬಂದಿದ್ದರು ಎಂದು ಕಿಶೋರ್, ಸ್ಥಳೀಯ ಅಂಗಡಿ ಮಾಲೀಕ ಮೊಹಮ್ಮದ್ ಇಸಾಕ್ ಎಂಬುವರಿಗೆ ತಿಳಿಸಿದ್ದ. ತಕ್ಷಣ ಅವರು ಅಂಗಡಿ ಬಳಿಯಿದ್ದ ಮೂವರು ಗ್ರಾಹಕರಲ್ಲಿ ಘಟನೆ ನಡೆದ ಸ್ಥಳಕ್ಕೆ ತೆರಳಿ ನೋಡುವಂತೆ ತಿಳಿಸಿದ್ದಾರೆ. ಆದರೆ ಸ್ಥಳದಲ್ಲಿ ಯಾರು ಕಂಡುಬರಲಿಲ್ಲ. ನಂತರ ಮೊಹಮ್ಮದ್ ಇಸಾಕ್ ಅವರು ಸ್ಥಳೀಯ ಮುಸ್ಲಿಂ ಯುವಕರ ಬಳಿ ಬೈಕಿನಲ್ಲೇ ಕಿಶೋರ್ ಅವರನ್ನು ಮನೆಗೆ ಬಿಟ್ಟುಬರುವಂತೆ ತಿಳಿಸಿದ್ದಾರೆ. ಮನೆಯಲ್ಲೂ ಪತ್ನಿ ಹಾಗೂ ಪುತ್ರನಲ್ಲಿ ತಲವಾರು ಹಲ್ಲೆಗೆ ಯತ್ನಿಸಿರುವ ಕಟ್ಟುಕತೆ ಹೇಳಿದ್ದು, ಅವರ ಪುತ್ರನೂ ಅಂಗಡಿ ಬಳಿಗೆ ಬಂದು ತಲವಾರು ದಾಳಿಗೆ ಯತ್ನಿಸಿರುವ ಕುರಿತು ತಿಳಿಸಿದ್ದ. ಬಳಿಕ ಸ್ಥಳೀಯರು ಪೊಲೀಸ್ ಕಂಟ್ರೋಲ್ ರೂಮಿಗೆ ಮಾಹಿತಿ ನೀಡಿದ್ದು, ತಕ್ಷಣ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ.
ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಕೊಣಾಜೆ ಮತ್ತು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನರಲ್ಲಿ ಆತಂಕ ಮೂಡಿತ್ತು. ಪೊಲೀಸ್ ಕಮಿಷನರ್ ಶಶಿಕುಮಾರ್ ಅವರೇ ಕಲ್ಲಾಪು ಪೊಲೀಸ್ ಆಯುಕ್ತರ ಕಚೇರಿಗೆ ಬಂದು, ಕಿಶೋರ್ನನ್ನು ವಿಚಾರಿ ಸಿದ್ದು, ಆತ ಹೇಳಿಕೆ ಬದಲಾ ಯಿಸಿದ್ದಾನೆ. ಅಲ್ಲದೆ, ಯಾವುದೇ ಘಟನೆ ನಡೆದಿಲ್ಲ ಎಂದು ಹೇಳಿ ಕೊಂಡಿದ್ದಾನೆ ಎಂದು ಉಳ್ಳಾಲ ಠಾಣಾಧಿಕಾರಿ ಸಂದೀಪ್ ತಿಳಿಸಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…