ಉಳ್ಳಾಲ: ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದಾಗ ತನ್ನ ಮೇಲೆ ಮೂವರು ತಲವಾರು ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ಕೆ.ಸಿ.ರೋಡ್ ನಿವಾಸಿ ಕಿಶೋರ್ (48) ಎಂಬುವರು ದೂರು ಹೇಳಿಕೊಂಡಿದ್ದು, ಪೊಲೀಸರು ತನಿಖೆ ನಡೆಸಿದಾಗ ಇಂತಹ ಯಾವುದೇ ಪ್ರಕರಣ ನಡೆಯದೇ ಇರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ದೂರುದಾರನ ವಿರುದ್ಧವೇ ಪ್ರಕರಣ ದಾಖಲಾಗಿದೆ.
ತನ್ನ ಮೇಲೆ ಹಲ್ಲೆ ಮೂವರು ತಲವಾರು ದಾಳಿ ನಡೆಸಲು ಬಂದಿದ್ದರು ಎಂದು ಕಿಶೋರ್, ಸ್ಥಳೀಯ ಅಂಗಡಿ ಮಾಲೀಕ ಮೊಹಮ್ಮದ್ ಇಸಾಕ್ ಎಂಬುವರಿಗೆ ತಿಳಿಸಿದ್ದ. ತಕ್ಷಣ ಅವರು ಅಂಗಡಿ ಬಳಿಯಿದ್ದ ಮೂವರು ಗ್ರಾಹಕರಲ್ಲಿ ಘಟನೆ ನಡೆದ ಸ್ಥಳಕ್ಕೆ ತೆರಳಿ ನೋಡುವಂತೆ ತಿಳಿಸಿದ್ದಾರೆ. ಆದರೆ ಸ್ಥಳದಲ್ಲಿ ಯಾರು ಕಂಡುಬರಲಿಲ್ಲ. ನಂತರ ಮೊಹಮ್ಮದ್ ಇಸಾಕ್ ಅವರು ಸ್ಥಳೀಯ ಮುಸ್ಲಿಂ ಯುವಕರ ಬಳಿ ಬೈಕಿನಲ್ಲೇ ಕಿಶೋರ್ ಅವರನ್ನು ಮನೆಗೆ ಬಿಟ್ಟುಬರುವಂತೆ ತಿಳಿಸಿದ್ದಾರೆ. ಮನೆಯಲ್ಲೂ ಪತ್ನಿ ಹಾಗೂ ಪುತ್ರನಲ್ಲಿ ತಲವಾರು ಹಲ್ಲೆಗೆ ಯತ್ನಿಸಿರುವ ಕಟ್ಟುಕತೆ ಹೇಳಿದ್ದು, ಅವರ ಪುತ್ರನೂ ಅಂಗಡಿ ಬಳಿಗೆ ಬಂದು ತಲವಾರು ದಾಳಿಗೆ ಯತ್ನಿಸಿರುವ ಕುರಿತು ತಿಳಿಸಿದ್ದ. ಬಳಿಕ ಸ್ಥಳೀಯರು ಪೊಲೀಸ್ ಕಂಟ್ರೋಲ್ ರೂಮಿಗೆ ಮಾಹಿತಿ ನೀಡಿದ್ದು, ತಕ್ಷಣ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ.
ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಕೊಣಾಜೆ ಮತ್ತು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನರಲ್ಲಿ ಆತಂಕ ಮೂಡಿತ್ತು. ಪೊಲೀಸ್ ಕಮಿಷನರ್ ಶಶಿಕುಮಾರ್ ಅವರೇ ಕಲ್ಲಾಪು ಪೊಲೀಸ್ ಆಯುಕ್ತರ ಕಚೇರಿಗೆ ಬಂದು, ಕಿಶೋರ್ನನ್ನು ವಿಚಾರಿ ಸಿದ್ದು, ಆತ ಹೇಳಿಕೆ ಬದಲಾ ಯಿಸಿದ್ದಾನೆ. ಅಲ್ಲದೆ, ಯಾವುದೇ ಘಟನೆ ನಡೆದಿಲ್ಲ ಎಂದು ಹೇಳಿ ಕೊಂಡಿದ್ದಾನೆ ಎಂದು ಉಳ್ಳಾಲ ಠಾಣಾಧಿಕಾರಿ ಸಂದೀಪ್ ತಿಳಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…