ಮಂಗಳೂರು : ಯುವಕನಿಗೆ ಬರ್ಬರವಾಗಿ ಹೊಟ್ಟೆ ಭಾಗಕ್ಕೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆತಡರಾತ್ರಿ ನಡೆದಿದೆ.
ಉಳ್ಳಾಲ ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಕೊಲೆಯತ್ನಕ್ಕೆ ಒಳಗಾದ ಯುವಕ ಎಂದು ಗುರುತಿಸಲಾಗಿದೆ.
ಗಂಭೀರ ಗಾಯಗೊಂಡ ಸದಕತ್ತುಲ್ಲಾ ಎಂಬ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್ ಎಂಬವರು ಇನ್ನಿಬ್ಬರನ್ನು ಸೇರಿಸಿಕೊಂಡು ಕೃತ್ಯ ಎಸಗಿರುವುದಾಗಿ ಶಂಕೆ ವ್ಯಕ್ತಪಡಿಸಲಾಗುತ್ತಿದೆ. ಇಬ್ಬರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸದಕತ್ತುಲ್ಲಾ ಮನೆಯಲ್ಲಿದ್ದ ಸಂದರ್ಭ ಎದುರುಗಡೆ ಕರೆಸಿ ಚೂರಿಯಿಂದ ಹೊಟ್ಟೆ ಭಾಗಕ್ಕೆ ಇರಿಯಲಾಗಿದೆ. ತಕ್ಷಣ ಆತ ಕುಸಿದು ಬಿದ್ದಿದ್ದು, ಗಾಯಗೊಂಡ ಯುವಕನ್ನು ಮನೆಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಫಿಶ್ ಆಯಿಲ್ ಮಿಲ್ ಮಾಲೀಕರಿಂದ ಬೆದರಿಸಿ ಹಣ ಪಡೆದಿರುವ ವಿಚಾರದಲ್ಲಿ ಇಬ್ಬರ ನಡುವೆ ವೈಷಮ್ಯವಿತ್ತು. ಕೆಲ ತಿಂಗಳುಗಳ ಹಿಂದೆ ಇದೇ ವಿಚಾರಕ್ಕೆ ಸಂಬಂಧಿಸಿ ಆರೋಪಿಗಳ ಪೈಕಿ ಓರ್ವನಿಗೆ ಸದಕತ್ತುಲ್ಲಾ ತಂಡ ಹಲ್ಲೆ ನಡೆಸಿತ್ತು.ಈ ಘಟನೆ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…