ಉಳ್ಳಾಲ (ದಕ್ಷಿಣ ಕನ್ನಡ): ಕಾಸರಗೋಡು ಜಿಲ್ಲೆಯಿಂದ ಮಂಗಳೂರು ಪ್ರವೇಶಕ್ಕೆ ನಕಲಿ ಆರ್ ಟಿಪಿಸಿಆರ್ ನೆಗೆಟಿವ್ ವರದಿ ತಂದಿದ್ದ ನಾಲ್ವರನ್ನು ಉಳ್ಳಾಲ ಪೊಲೀಸರು ಗುರುವಾರ ತಲಪಾಡಿಯಲ್ಲಿ ಬಂಧಿಸಿದ್ದಾರೆ.
ಕೇರಳದ ಆದಿಲ್, ಹನಿನ್, ಇಸ್ಮಾಯಿಲ್ ಮತ್ತು ಅಬ್ದುಲ್ ತಮೀಮ್ ಬಂಧಿತರು. ನಾಲ್ವರು ಮೊಬೈಲ್ ನಲ್ಲಿ ಎಡಿಟ್ ಮಾಡಿದ್ದ ನಕಲಿ ರಿಪೋರ್ಟ್ ತೋರಿಸಿ ಮಂಗಳೂರು ಪ್ರವೇಶಕ್ಕೆ ಯತ್ನಿಸುತ್ತಿದ್ದರು. ಈ ವೇಳೆ ಪೊಲೀಸರು ಪರಿಶೀಲನೆ ನಡೆಸಿದಾಗ ನಕಲಿ ಎಂಬುದು ಪತ್ತೆಯಾಗಿದೆ.
ನಾಲ್ವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಕೇರಳದಿಂದ ಬರುವಾಗ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿದವರಿಗೆ ದಕ್ಷಿಣ ಕನ್ನಡ ಜಿಲ್ಲೆ ಬಂದ ನಂತರ ಕೋವಿಡ್-19 ದೃಢವಾಗುತ್ತಿದೆ. ಹೀಗಾಗಿ ಆರ್ ಟಿಪಿಸಿಆರ್ ನೆಗೆಟಿವ್ ವರದಿಯ ದೃಢತೆಯನ್ನು ಪರೀಕ್ಷಿಸಲು ದಕ್ಷಿಣಕನ್ನಡ ಜಿಲ್ಲಾಡಳಿತ ಮುಂದಾಗಿದೆ.
ನೆಗೆಟಿವ್ ವರದಿಯೊಂದಿಗೆ ಕೇರಳದಿಂದ ಜಿಲ್ಲೆಗೆ ಬರುವ ವಿದ್ಯಾರ್ಥಿಗಳಿಗೆ ಏಳು ದಿನಗಳ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ. ಏಳು ದಿನಗಳ ನಂತರ ಮತ್ತೊಮ್ಮೆ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲಾಗುತ್ತಿದೆ.
ಪ್ರಮುಖವಾಗಿ ನರ್ಸಿಂಗ್, ಎಂಜನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಕೋವಿಡ್ ಪತ್ತೆಯಾಗುತ್ತಿದೆ. ಕಾಲೇಜುಗಳು ಆರಂಭವಾದ ಬಳಿಕ ಇದುವರೆಗೆ ಜಿಲ್ಲೆಯಲ್ಲಿ 630 ವಿದ್ಯಾರ್ಥಿಗಳಲ್ಲಿ ಕೋವಿಡ್ ಪತ್ತೆಯಾಗಿದೆ.
ಚಿಕ್ಕಮಗಳೂರು: ಸರ್ವೇ ನಡೆಸಿ ಸ್ಕೆಚ್ ತಯಾರಿಸಿಕೊಡಲು 10 ಲಕ್ಷ ರೂ.ಲಂಚಕ್ಕೆ ಬೇಡಿಕೆ ; ಇಬ್ಬರು ಸರ್ವೇಯರ್ಗಳು ಲೋಕಾಯುಕ್ತ ಬಲೆಗೆ ಚಿಕ್ಕಮಗಳೂರು: ಕೃಷಿ…
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಇಲ್ಲ ಸುಬ್ರಹ್ಮಣ್ಯ: ಕುಕ್ಕೆ…
ಕರ್ನಾಟಕದಲ್ಲಿ 1 ವರ್ಷ ಕೃತಕ ಪನ್ನೀರ್ ಬ್ಯಾನ್ ಬೆಂಗಳೂರು: ಕರ್ನಾಟಕದಲ್ಲಿ 1 ವರ್ಷದ ಅವಧಿಗೆ ಕೃತಕ ಪನ್ನೀರ್ ಬ್ಯಾನ್ ಮಾಡಿ…
ಉಡುಪಿ : ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ ಉಡುಪಿ : ರಾಜ್ಯ ಸರ್ಕಾರದ ಆದೇಶದಂತೆ ಕುಂದಾಪುರ…
ಉಡುಪಿ : ಆ. 28ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ…
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…