ಉಳ್ಳಾಲ: ಯುವಕನೋರ್ವ ನಕಲಿ ಕೀ ಬಳಸಿ ಉಳ್ಳಾಲ ಪುರಸಭೆಯ ಮುಂಭಾಗದಲ್ಲಿ ನಿಲ್ಲಿಸಿದ ಬಸ್ ನ್ನು ಉಡುಪಿಯತ್ತ ಕದ್ದೊಯ್ದ ಘಟನೆ ಶನಿವಾರ ನಡೆದಿದೆ.
ಆರೋಪಿಯನ್ನು ನಿಫಾಝ್ ಎಂದು ಗುರುತಿಸಲಾಗಿದೆ. ಉಳ್ಳಾಲದ ಅಬ್ಬಾಲಿ ಆಲಿ ಮಾಲೀಕತ್ವದ ಎ.ಆರ್.ಟ್ರಾವೆಲ್ಸ್ ಬಸ್ನ್ನು ಚಾಲಕ ಶನಿವಾರ ರಾತ್ರಿ ನಿಲ್ಲಿಸಿ ಕೋಟೆಪುರದಲ್ಲಿ ನಿಲ್ಲಿಸಿ ಮನೆಗೆ ತೆರಳಿದ್ದರು. ಬೆಳಗ್ಗೆ ಕ್ಲೀನರ್ ಬಂದು ನೋಡಿದಾಗ ಬಸ್ ಇರಲಿಲ್ಲ. ಮಾಲೀಕರಿಗೆ ಕರೆ ಮಾಡಿ ವಿಚಾರಿಸಿದಾಗ ಬಸ್ ಕಳವಾಗಿದ್ದು ಬೆಳಕಿಗೆ ಬಂದಿದ್ದು, ತಕ್ಷಣ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಕೆಲವೇ ಹೊತ್ತಿನಲ್ಲಿ ಬಸ್ ಮಾಲೀಕರ ಮಿತ್ರರೊಬ್ಬರು ಉಡುಪಿಯಿಂದ ಕರೆ ಮಾಡಿ, ಬಸ್ ಈಗಷ್ಟೇ ಹೆದ್ದಾರಿಯಲ್ಲಿ ಸಂಚರಿಸಿದ್ದು ಎಲ್ಲಿಗಾದರೂ ಪ್ರವಾಸಕ್ಕೆ ಹೋಗ್ತಿದೆಯಾ ಎಂದು ವಿಚಾರಿಸಿದ್ದಾರೆ. ತಕ್ಷಣ ಬಸ್ ತಡೆಯುವಂತೆ ಮಾಲೀಕ ಮಿತ್ರನಿಗೆ ತಿಳಿಸಿದ್ದು, ಅವರು ಉಡುಪಿ ಪೊಲೀಸರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಉಡುಪಿ ನಗರ ಠಾಣೆ ಪೊಲೀಸರು ಆರೋಪಿ ಸಹಿತ ಬಸ್ ವಶಕ್ಕೆ ಪಡೆದಿದ್ದಾರೆ. ಈ ನಡುವೆ ಬಸ್ ಮಾಲಕರಿಗೆ ಉಡುಪಿ ಪೊಲೀಸರು ಮಾಹಿತಿ ನೀಡಿದ್ದು, ಅವರು ಆಗಮಿಸಿ ಬಸ್ಸನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಯುವಕ ಗಾಂಜಾ ವ್ಯಸನಿಯಾಗಿದ್ದ ಎನ್ನಲಾಗಿದ್ದು, ಉಳ್ಳಾಲದಿಂದ ಬಸ್ಸನ್ನು ಕೊಂಡೊಯ್ಯುವ ಸಂದರ್ಭ ಸಿಕ್ಕಿದ ಎರಡು ಟೋಲ್ಗೇಟ್ಗಳನ್ನೂ ಹೊಡೆದುಕೊಂಡು ಹೋದ ಪರಿಣಾಮ ಬಸ್ ಗಾಜುಗಳು ಒಡೆದಿವೆ. ಉಡುಪಿ ತಲುಪಿದಾಗ ಆರೋಪಿ ತಂದೆಗೆ ಕರೆ ಮಾಡಿ, ತಾನು ಬಸ್ ಖರೀದಿಸಿದ್ದು ಉಡುಪಿಯಲ್ಲಿದೆ ಎಂದು ತಿಳಿಸಿದ್ದಾನೆ. ಬಸ್ಸಿನ ಗಾಜುಗಳು ಪುಡಿಯಾಗಿದ್ದಲ್ಲದೆ ಗೇರ್ಬಾಕ್ಸ್ ಹಾನಿಯಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…