ಉಳ್ಳಾಲ: ಯುವಕನೋರ್ವ ನಕಲಿ ಕೀ ಬಳಸಿ ಉಳ್ಳಾಲ ಪುರಸಭೆಯ ಮುಂಭಾಗದಲ್ಲಿ ನಿಲ್ಲಿಸಿದ ಬಸ್ ನ್ನು ಉಡುಪಿಯತ್ತ ಕದ್ದೊಯ್ದ ಘಟನೆ ಶನಿವಾರ ನಡೆದಿದೆ.
ಆರೋಪಿಯನ್ನು ನಿಫಾಝ್ ಎಂದು ಗುರುತಿಸಲಾಗಿದೆ. ಉಳ್ಳಾಲದ ಅಬ್ಬಾಲಿ ಆಲಿ ಮಾಲೀಕತ್ವದ ಎ.ಆರ್.ಟ್ರಾವೆಲ್ಸ್ ಬಸ್ನ್ನು ಚಾಲಕ ಶನಿವಾರ ರಾತ್ರಿ ನಿಲ್ಲಿಸಿ ಕೋಟೆಪುರದಲ್ಲಿ ನಿಲ್ಲಿಸಿ ಮನೆಗೆ ತೆರಳಿದ್ದರು. ಬೆಳಗ್ಗೆ ಕ್ಲೀನರ್ ಬಂದು ನೋಡಿದಾಗ ಬಸ್ ಇರಲಿಲ್ಲ. ಮಾಲೀಕರಿಗೆ ಕರೆ ಮಾಡಿ ವಿಚಾರಿಸಿದಾಗ ಬಸ್ ಕಳವಾಗಿದ್ದು ಬೆಳಕಿಗೆ ಬಂದಿದ್ದು, ತಕ್ಷಣ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಕೆಲವೇ ಹೊತ್ತಿನಲ್ಲಿ ಬಸ್ ಮಾಲೀಕರ ಮಿತ್ರರೊಬ್ಬರು ಉಡುಪಿಯಿಂದ ಕರೆ ಮಾಡಿ, ಬಸ್ ಈಗಷ್ಟೇ ಹೆದ್ದಾರಿಯಲ್ಲಿ ಸಂಚರಿಸಿದ್ದು ಎಲ್ಲಿಗಾದರೂ ಪ್ರವಾಸಕ್ಕೆ ಹೋಗ್ತಿದೆಯಾ ಎಂದು ವಿಚಾರಿಸಿದ್ದಾರೆ. ತಕ್ಷಣ ಬಸ್ ತಡೆಯುವಂತೆ ಮಾಲೀಕ ಮಿತ್ರನಿಗೆ ತಿಳಿಸಿದ್ದು, ಅವರು ಉಡುಪಿ ಪೊಲೀಸರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಉಡುಪಿ ನಗರ ಠಾಣೆ ಪೊಲೀಸರು ಆರೋಪಿ ಸಹಿತ ಬಸ್ ವಶಕ್ಕೆ ಪಡೆದಿದ್ದಾರೆ. ಈ ನಡುವೆ ಬಸ್ ಮಾಲಕರಿಗೆ ಉಡುಪಿ ಪೊಲೀಸರು ಮಾಹಿತಿ ನೀಡಿದ್ದು, ಅವರು ಆಗಮಿಸಿ ಬಸ್ಸನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಯುವಕ ಗಾಂಜಾ ವ್ಯಸನಿಯಾಗಿದ್ದ ಎನ್ನಲಾಗಿದ್ದು, ಉಳ್ಳಾಲದಿಂದ ಬಸ್ಸನ್ನು ಕೊಂಡೊಯ್ಯುವ ಸಂದರ್ಭ ಸಿಕ್ಕಿದ ಎರಡು ಟೋಲ್ಗೇಟ್ಗಳನ್ನೂ ಹೊಡೆದುಕೊಂಡು ಹೋದ ಪರಿಣಾಮ ಬಸ್ ಗಾಜುಗಳು ಒಡೆದಿವೆ. ಉಡುಪಿ ತಲುಪಿದಾಗ ಆರೋಪಿ ತಂದೆಗೆ ಕರೆ ಮಾಡಿ, ತಾನು ಬಸ್ ಖರೀದಿಸಿದ್ದು ಉಡುಪಿಯಲ್ಲಿದೆ ಎಂದು ತಿಳಿಸಿದ್ದಾನೆ. ಬಸ್ಸಿನ ಗಾಜುಗಳು ಪುಡಿಯಾಗಿದ್ದಲ್ಲದೆ ಗೇರ್ಬಾಕ್ಸ್ ಹಾನಿಯಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…