ಉಳ್ಳಾಲ: ಯುವಕನೋರ್ವ ನಕಲಿ ಕೀ ಬಳಸಿ ಉಳ್ಳಾಲ ಪುರಸಭೆಯ ಮುಂಭಾಗದಲ್ಲಿ ನಿಲ್ಲಿಸಿದ ಬಸ್ ನ್ನು ಉಡುಪಿಯತ್ತ ಕದ್ದೊಯ್ದ ಘಟನೆ ಶನಿವಾರ ನಡೆದಿದೆ.
ಆರೋಪಿಯನ್ನು ನಿಫಾಝ್ ಎಂದು ಗುರುತಿಸಲಾಗಿದೆ. ಉಳ್ಳಾಲದ ಅಬ್ಬಾಲಿ ಆಲಿ ಮಾಲೀಕತ್ವದ ಎ.ಆರ್.ಟ್ರಾವೆಲ್ಸ್ ಬಸ್ನ್ನು ಚಾಲಕ ಶನಿವಾರ ರಾತ್ರಿ ನಿಲ್ಲಿಸಿ ಕೋಟೆಪುರದಲ್ಲಿ ನಿಲ್ಲಿಸಿ ಮನೆಗೆ ತೆರಳಿದ್ದರು. ಬೆಳಗ್ಗೆ ಕ್ಲೀನರ್ ಬಂದು ನೋಡಿದಾಗ ಬಸ್ ಇರಲಿಲ್ಲ. ಮಾಲೀಕರಿಗೆ ಕರೆ ಮಾಡಿ ವಿಚಾರಿಸಿದಾಗ ಬಸ್ ಕಳವಾಗಿದ್ದು ಬೆಳಕಿಗೆ ಬಂದಿದ್ದು, ತಕ್ಷಣ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಕೆಲವೇ ಹೊತ್ತಿನಲ್ಲಿ ಬಸ್ ಮಾಲೀಕರ ಮಿತ್ರರೊಬ್ಬರು ಉಡುಪಿಯಿಂದ ಕರೆ ಮಾಡಿ, ಬಸ್ ಈಗಷ್ಟೇ ಹೆದ್ದಾರಿಯಲ್ಲಿ ಸಂಚರಿಸಿದ್ದು ಎಲ್ಲಿಗಾದರೂ ಪ್ರವಾಸಕ್ಕೆ ಹೋಗ್ತಿದೆಯಾ ಎಂದು ವಿಚಾರಿಸಿದ್ದಾರೆ. ತಕ್ಷಣ ಬಸ್ ತಡೆಯುವಂತೆ ಮಾಲೀಕ ಮಿತ್ರನಿಗೆ ತಿಳಿಸಿದ್ದು, ಅವರು ಉಡುಪಿ ಪೊಲೀಸರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಉಡುಪಿ ನಗರ ಠಾಣೆ ಪೊಲೀಸರು ಆರೋಪಿ ಸಹಿತ ಬಸ್ ವಶಕ್ಕೆ ಪಡೆದಿದ್ದಾರೆ. ಈ ನಡುವೆ ಬಸ್ ಮಾಲಕರಿಗೆ ಉಡುಪಿ ಪೊಲೀಸರು ಮಾಹಿತಿ ನೀಡಿದ್ದು, ಅವರು ಆಗಮಿಸಿ ಬಸ್ಸನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಯುವಕ ಗಾಂಜಾ ವ್ಯಸನಿಯಾಗಿದ್ದ ಎನ್ನಲಾಗಿದ್ದು, ಉಳ್ಳಾಲದಿಂದ ಬಸ್ಸನ್ನು ಕೊಂಡೊಯ್ಯುವ ಸಂದರ್ಭ ಸಿಕ್ಕಿದ ಎರಡು ಟೋಲ್ಗೇಟ್ಗಳನ್ನೂ ಹೊಡೆದುಕೊಂಡು ಹೋದ ಪರಿಣಾಮ ಬಸ್ ಗಾಜುಗಳು ಒಡೆದಿವೆ. ಉಡುಪಿ ತಲುಪಿದಾಗ ಆರೋಪಿ ತಂದೆಗೆ ಕರೆ ಮಾಡಿ, ತಾನು ಬಸ್ ಖರೀದಿಸಿದ್ದು ಉಡುಪಿಯಲ್ಲಿದೆ ಎಂದು ತಿಳಿಸಿದ್ದಾನೆ. ಬಸ್ಸಿನ ಗಾಜುಗಳು ಪುಡಿಯಾಗಿದ್ದಲ್ಲದೆ ಗೇರ್ಬಾಕ್ಸ್ ಹಾನಿಯಾಗಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…