Featured

ಉಳ್ಳಾಲ : ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ : ಆರೋಪಿಗಳ ಬಂಧನ – vishwanews24

ಉಳ್ಳಾಲ : ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ : ಆರೋಪಿಗಳ ಬಂಧನ

ಉಳ್ಳಾಲ: ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಓರ್ವ ತಲೆಮರೆಸಿಕೊಂಡ ಘಟನೆ ತೊಕ್ಕೊಟ್ಟಿನ ಹಣಕಾಸು ಸಂಸ್ಥೆಯೊಂದರಲ್ಲಿ ನಡೆದಿದೆ.

ಮಹಾರಾಷ್ಟ್ರ ಮೂಲದ ವಿಕ್ರಮ್, ಹರೇಕಳದ ಇಸ್ಮಾಯಿಲ್, ಮುಹಮ್ಮದ್ ಮಿಸ್ಬಾ, ಕಾಟಿಪಳ್ಳದ ಉಮರ್ ಫಾರೂಕ್, ಉಳ್ಳಾಲ ಮೇಲಂಗಡಿಯ ಇಮ್ತಿಯಾಝ್, ಮಂಚಿಲದ ಝಹೀಮ್ ಅಹ್ಮದ್ ಬಂಧಿತರಾಗಿದ್ದು, ಹೆಜಮಾಡಿಯ ನೌಫಾಲ್ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಕೊಣಾಜೆ ವಿವಿ ರಸ್ತೆಯಲ್ಲಿರುವ ಹಣಕಾಸು ಸಂಸ್ಥೆಯೊಂದಕ್ಕೆ ನ.22ರಂದು ಸಂಜೆ ಸುಮಾರು 5 ಗಂಟೆ ಹೊತ್ತಿಗೆ ಬಂದಿದ್ದ ನೌಫಾಲ್ ಮತ್ತು ಝಹೀಮ್ ಅಹ್ಮದ್ ಎಂಬವರು 41 ಗ್ರಾಂ ತೂಗುವ ಎರಡು ಚೈನ್ ಗಳನ್ನು ಅಡವಿರಿಸಿ ಸಾಲ ಕೊಡುವಂತೆ ಕೇಳಿದ್ದಾರೆ. ಈ ಸಂದರ್ಭ ಸಂಸ್ಥೆಯ ಮಾಲಕ ದಿನೇಶ್ ರೈ ಮತ್ತು ಸಿಬ್ಬಂದಿ ನಿಕೇಶ್ ಎಂಬವರು ಆರೋಪಿಗಳು ನೀಡಿದ ಚಿನ್ನಾಭರಣ ಪರಿಶೀಲಿಸಿದಾಗ ಚಿನ್ನದ ಪರಿಶುದ್ಧತೆಯ 916 ಸಂಕೇತ ಮತ್ತು ಓರೆ ಕಲ್ಲಿನಲ್ಲಿ ಉಜ್ಜಿದಾಗಲೂ ಅಸಲಿಯಂತೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಝಹೀಮ್ ಅಹ್ಮದ್ ಹೆಸರಿನಲ್ಲಿ ಆಭರಣಗಳನ್ನು ಅಡವು ಇಟ್ಟು 3 ಲಕ್ಷದ 55 ಸಾವಿರ ರೂ. ಹಣವನ್ನು ಮಾಲಕ ಸಾಲ ನೀಡಿದ್ದಾರೆ.

ನ.24ರ ಸಂಜೆ 5 ಗಂಟೆ ಹೊತ್ತಿಗೆ ಉಳ್ಳಾಲ ಮೇಲಂಗಡಿಯ ನಿವಾಸಿ ಇಮ್ತಿಯಾಝ್ ಎಂಬಾತ ಇದೇ ಹಣಕಾಸು ಸಂಸ್ಥೆಗೆ ಬಂದಿದ್ದು 55 ಗ್ರಾಂ ತೂಕದ ಎರಡು ಚೈನ್ ಮತ್ತು ಒಂದು ಬ್ರಾಸ್ಲೇಟ್ ಅಡವಿಟ್ಟು 4 ಲಕ್ಷ 80 ಸಾವಿರ ರೂಪಾಯಿ ಸಾಲ ಕೊಡುವಂತೆ ತಿಳಿಸಿದ್ದಾನೆ. ಆಭರಣ ಪರಿಶೀಲಿಸಿದಾಗ ಅದರಲ್ಲೂ 916 ಸಂಕೇತ ಮತ್ತು ಓರೆ ಕಲ್ಲಿಗೆ ಉಜ್ಜಿದಾಗ ಚಿನ್ನವೆಂದೇ ಕಂಡುಬಂದಿದೆ. ಚಿನ್ನ ಖರೀದಿ ಬಗ್ಗೆ ವಿಚಾರಿಸಿದಾಗ ದುಬೈಯ ಚಿನ್ನವೆಂದು ತಿಳಿಸಿದ್ದಾಗಿ ಹೇಳಲಾಗಿದೆ.

ಆತನ ಮಾತಿನಿಂದ ಅನುಮಾನಗೊಂಡ ಸಂಸ್ಥೆಯ ಮಾಲಕ ದಿನೇಶ್ ರೈ ಅವರು ಇಮ್ತಿಯಾಝ್ ನೀಡಿದ ಆಭರಣ ಮತ್ತು ನ.22ರಂದು ಝಹೀಮ್ ಅಹ್ಮದ್ ಅಡವಿಟ್ಟಿದ್ದ ಆಭರಣಗಳನ್ನು ಮಂಗಳೂರಲ್ಲಿ ಚಿನ್ನದ ಕೆಲಸ ಮಾಡುವ ತನ್ನ ಸ್ನೇಹಿತ ಉದಯ್ ಆಚಾರ್ಯ ಎಂಬವರ ಬಳಿ ಹೋಗಿ ಪರೀಕ್ಷಿಸಿದ್ದಾರೆ. ಈ ವೇಳೆ ಆಭರಣಗಳನ್ನು ಆ್ಯಸಿಡ್ ಲ್ಲಿನ ಮುಳುಗಿಸಿ ಬಿಸಿ ಮಾಡಿದಾಗ ನೊರೆ ಬಂದಿದ್ದು ನಕಲಿ ಎನ್ನುವುದು ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಹಣಕಾಸು ಸಂಸ್ಥೆಯ ದಿನೇಶ್ ರೈ ಅವರು ಉಳ್ಳಾಲ ಠಾಣೆಯಲ್ಲಿ ನೀಡಿದ ದೂರಿನ ಆಧಾರದಲ್ಲಿ ಆರೋಪಿಗಳಾದ ಝಹೀಮ್ ಅಹ್ಮದ್, ನೌಫಾಲ್ ಹಾಗೂ ಇಮ್ತಿಯಾಝ್ ಎಂಬವರ ಮೇಲೆ ಕೇಸು ದಾಖಲಿಸಿ, ಇಮ್ತಿಯಾಝ್ ನನ್ನು ಬಂಧಿಸಿದ್ದಾರೆ. ವಿಚಾರಣೆಯ ವೇಳೆ ಆತ ನೀಡಿದ ಮಾಹಿತಿಯಾಧಾರದಲ್ಲಿ ಇತರ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಆರು ಮೊಬೈಲ್ ಫೋನ್, 47,000 ರೂಪಾಯಿ ನಗದು ಮತ್ತು 9 ಕ್ಯಾರೇಟ್ ನ 141 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

13 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

16 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

16 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

16 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

16 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

17 hours ago