Featured

ಉಳ್ಳಾಲ: ನಾನು ಮಾಡುವ ಯಾವುದೇ ಅಭಿವೃದ್ಧಿ ಕೆಲಸ ಓಟಿಗಾಗಿ ಅಲ್ಲ, ಮುಂದಿನ ತಲೆಮಾರಿಗಾಗಿ : ಯು.ಟಿ.ಖಾದರ್ – vishwanews24

ಉಳ್ಳಾಲ:  ಅಭಿವೃದ್ಧಿಯ ವಿಚಾರ ಬಂದಾಗ ಯಾವುದೇ ರಾಜಿಯಿಲ್ಲ : ಯು.ಟಿ.ಖಾದರ್

ಉಳ್ಳಾಲ: ನಾನು ಮಾಡುವ ಯಾವುದೇ ಅಭಿವೃದ್ಧಿ ಕೆಲಸ ಓಟಿಗಾಗಿ ಅಲ್ಲ, ಮುಂದಿನ ತಲೆಮಾರಿಗಾಗಿ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿಯ ವಿಚಾರ ಬಂದಾಗ ಯಾವುದೇ ರಾಜಿಯಿಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.

ತೊಕ್ಕೊಟ್ಟಿನಿಂದ ಚೆಂಬುಗುಡ್ಡೆವರೆಗೆ ಹಾಗೂ ಅಸೈಗೋಳಿಯಿಂದ ನಡುಪದವು ತನಕ ನಿರ್ಮಾಣ ಆಗಲಿರುವ ಚತುಷ್ಪಥ ರಸ್ತೆ ಕಾಮಗಾರಿಗೆ ತೊಕ್ಕೊಟ್ಟಿನಲ್ಲಿ ಶಂಕು ಸ್ಥಾಪನಾ ಕಾರ್ಯಕ್ರಮ ನಡೆಯಿತು. ಈ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇಷ್ಟು ವರ್ಷ ಯಾವುದೇ ವ್ಯಾಪಾರಿಗಳಿಗೆ ತೊಂದರೆ ನೀಡಿಲ್ಲ, ಅಂಗಡಿ ಎದುರು ಶೀಟ್ ಎಷ್ಟು ಮುಂದಕ್ಕೆ ಹಾಕಿದರೂ ಅಡ್ಡಿಪಡಿಸಿಲ್ಲ. ಆದರೆ ರಸ್ತೆ ಅಭಿವೃದ್ಧಿ ಆಗುವಾಗ ವ್ಯಾಪಾರಿಗಳ ಸಹಕಾರ ಅಗತ್ಯ, ರಸ್ತೆ ನಿರ್ಮಾಣ ಬಳಿಕ ದುಡಿಯುವ ವರ್ಗ ರಿಕ್ಷಾ ಚಾಲಕರ ಹಿತದೃಷ್ಟಿಯಿಂದ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಉಳ್ಳಾಲ ಸ್ಮಾರ್ಟ್ ಮಾಡುವ ನಿಟ್ಟಿನಲ್ಲಿ ವಿದ್ಯುತ್ ತಂತಿಗಳನ್ನು ಮಣ್ಣಿನಡಿ ಹಾಕುವ ವ್ಯವಸ್ಥೆಗೆ 220 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ. 24 ಗಂಟೆ ಕುಡಿಯುವ ನೀರು, ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲಾಗುತ್ತಿದೆ. ಈಗಾಗಲೇ ಕ್ಷೇತ್ರದಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ 80ರಿಂದ 100 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ಧಾರ್ಮಿಕ ಪರಿಷತ್ ಸದಸ್ಯ ಸುರೇಶ್ ಭಟ್ನಗರ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ನಗರಸಭೆಯ ಅಧ್ಯಕ್ಷೆ ಶಶಿಕಲಾ ಚೆಂಬುಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

12 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

16 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

18 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

19 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

20 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

20 hours ago