ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ 24 ಪುಟಗಳ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.
ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ(25)ಆತ್ಮ ಹತ್ಯೆಗೈದ ಯುವತಿ.ನಿನ್ನೆ ರಾತ್ರಿ ಅಶ್ವಿನಿ ತನ್ನ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಲೆನ್ನಲಾಗಿದ್ದು ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದು ಬೆಳಕಿಗೆ ಬಂದಿದೆ.ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ.ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆಯಂತೆ.ಅಶ್ವಿನಿ ಸಾಮಾನ್ಯ ಕುಟುಂಬದವಲಾಗಿದ್ದು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು.ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತ ಎಂಬವರಿಂದ ಅಶ್ವಿನಿಯೆ ಮನೆಯೊಂದನ್ನ ಖರೀದಿಸಿದ್ದು ಕಳೆದ ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ ,ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರೆನ್ನಲಾಗಿದೆ.
ಡೆತ್ ನೋಟಲ್ಲಿ ಅಶ್ವಿನಿ ತನ್ನ ಪ್ರಿಯಕರನ ಹೆಸರು ಉಲ್ಲೇಖಿಸಿ ಐ ಲವ್ ಯೂ ಅಂತ ಬರೆದಿದ್ದು ತಾನು ಬಳಸುತ್ತಿದ್ದ ಐ ಫೋನನ್ನ ಆತನಿಗೆ ನೀಡಬೇಕೆಂದು ಹೇಳಿದ್ದಾಳೆ.
ಹಲವು ಸಂಕಷ್ಟಗೊಳಗಾದ ಅಶ್ವಿನಿ ಖಿನ್ನತೆಗೊಳಗಾಗಿ ಆತ್ಮ ಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.ಮೃತ ದೇಹವನ್ನ ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…