ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ 24 ಪುಟಗಳ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.
ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ(25)ಆತ್ಮ ಹತ್ಯೆಗೈದ ಯುವತಿ.ನಿನ್ನೆ ರಾತ್ರಿ ಅಶ್ವಿನಿ ತನ್ನ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಲೆನ್ನಲಾಗಿದ್ದು ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದು ಬೆಳಕಿಗೆ ಬಂದಿದೆ.ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ.ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆಯಂತೆ.ಅಶ್ವಿನಿ ಸಾಮಾನ್ಯ ಕುಟುಂಬದವಲಾಗಿದ್ದು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು.ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತ ಎಂಬವರಿಂದ ಅಶ್ವಿನಿಯೆ ಮನೆಯೊಂದನ್ನ ಖರೀದಿಸಿದ್ದು ಕಳೆದ ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ ,ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರೆನ್ನಲಾಗಿದೆ.
ಡೆತ್ ನೋಟಲ್ಲಿ ಅಶ್ವಿನಿ ತನ್ನ ಪ್ರಿಯಕರನ ಹೆಸರು ಉಲ್ಲೇಖಿಸಿ ಐ ಲವ್ ಯೂ ಅಂತ ಬರೆದಿದ್ದು ತಾನು ಬಳಸುತ್ತಿದ್ದ ಐ ಫೋನನ್ನ ಆತನಿಗೆ ನೀಡಬೇಕೆಂದು ಹೇಳಿದ್ದಾಳೆ.
ಹಲವು ಸಂಕಷ್ಟಗೊಳಗಾದ ಅಶ್ವಿನಿ ಖಿನ್ನತೆಗೊಳಗಾಗಿ ಆತ್ಮ ಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.ಮೃತ ದೇಹವನ್ನ ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…