Featured

ಉಳ್ಳಾಲ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ವ್ಯಕ್ತಿ ಸಾವು – Vishwanews24

ಉಳ್ಳಾಲ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ವ್ಯಕ್ತಿ ಸಾವು

ಉಳ್ಳಾಲ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (46) ಎಂಬವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು, ಅದಕ್ಕಾಗಿ ಪ್ರಕಾಶ್ ಅವರು ಸ್ನೇಹಿತರು ಹಾಗೂ ಸಂಬಂಧಿಕರನ್ನು ಮನೆಗೆ ಕರೆದಿದ್ದರು. ಸುಮಾರು 20ರಷ್ಟು ನೆಂಟರು ಸ್ನೇಹಿತರನ್ನು ಕರೆದುಕೊಂಡು ಪ್ರಕಾಶ್ ಅವರು ತಮ್ಮ ತೋಟದ ಬಳಿಯಿರುವ ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಅಲ್ಲಿ ನದಿ ನೀರಿಗೆ ಅಡಿಕೆ ಮರವನ್ನು (ಬಂಬು) ಅಡ್ಡವಾಗಿ ಹಾಕಿದ್ದರು. ಅದರಲ್ಲಿ ನಡೆದುಕೊಂಡು ಹೋಗುವ ಸಂದರ್ಭ ಆಕಸ್ಮಿಕ ಕಾಲುಜಾರಿ ಬಿದ್ದು , ನದಿ ನೀರಿನ ಹೂಳಿನಲ್ಲಿ ಹೂತುಹೋಗಿದ್ದರು. ಈಜಲು ಪರಿಣತರಾಗಿದ್ದರೂ ಮೇಲೆ ಬರಲು ಸಾಧ್ಯವಾಗದೇ, ನದಿ ನೀರಿನಲ್ಲಿ ಮುಳುಗಿದ್ದಾರೆ.

ಸ್ಥಳೀಯ ಈಜುಗಾರರು ಅವರನ್ನು ಮೇಲಕ್ಕೆತ್ತಲು ಪ್ರಯತ್ನಿಸಿದಾಗ ಸಾಧ್ಯವಾಗದೇ ಇದ್ದಾಗ, ಉತ್ತರಪ್ರದೇಶ ಮೂಲದ ಮರಳು ತೆಗೆಯುವ ಕಾರ್ಮಿಕರು ಶೋಧ ನಡೆಸಿ ಮೇಲಕ್ಕೆ ಎತ್ತಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಪ್ರಕಾಶ್ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.

ಮೃತರು ಬೈಕಂಪಾಡಿಯ ಎಂ.ಸಿ.ಎಫ್‌ನಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಉದ್ಯೋಗದ ಜೊತೆಗೆ ಕೃಷಿ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು ಪ್ರಗತಿ ಪರ ಕೃಷಿಕರೂ ಆಗಿದ್ದರು. ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

8 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

8 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

9 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

10 hours ago