ಉಳ್ಳಾಲ, : ರಿಕ್ಷಾ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನೇತ್ರಾವತಿ ಸೇತುವೆಯಲ್ಲಿ ಮಾ.27 ಬೆಳಗ್ಗೆಸಂಭವಿಸಿದೆ.
ಮೃತರನ್ನು ಪಜೀರು ಸೇನೆರೆಬೈಲು ಸಂಜೀವ ಪೂಜಾರಿ ಎಂಬವರ ಪುತ್ರ ಶ್ಯಾಮಪ್ರಸಾದ್ (45)ಎಂದು ಗುರುತಿಸಲಾಗಿದೆ.
ಇವರು ಬೆಳಗ್ಗೆ ಮನೆ ಸಮೀಪದ ಬಾಡಿಗೆ ದೊರಕಿತೆಂದು ಮನೆಯಲ್ಲಿ ತಿಳಿಸಿ ಮಂಗಳೂರಿಗೆ ತೆರಳಿದ್ದರು. ಅಲ್ಲಿಂದ ವಾಪಸ್ಸಾಗುವ ಸಂದರ್ಭ ಕಾರು ಢಿಕ್ಕಿ ಹೊಡೆದಿದೆ. ಪಡೀಲ್ ಕಣ್ಣೂರಿನಿಂದ ತಲಪಾಡಿ ಶಾರದಾ ವಿದ್ಯಾ ಸಂಸ್ಥೆಗೆ ಸಹೋದರನನ್ನು ಬಿಡಲು ಬರುತ್ತಿದ್ದ ಕಾರು ಚಾಲಕ ರಿಕ್ಷಾಗೆ ಢಿಕ್ಕಿ ಹೊಡೆದಿದ್ದಾನೆ. ರಿಕ್ಷಾದ ಹಿಂಬದಿಗೆ ಕಾರು ಢಿಕ್ಕಿ ಹೊಡೆಯುತ್ತಿದ್ದಂತೆ , ಸೇತುವೆಯ ಬದಿಯಲ್ಲಿ ಅಳವಡಿಸಿದ ಗಿಂಡಿಗೆ ರಿಕ್ಷಾ ತಗಲಿ ಚಾಲಕ ಹೊರಗೆಸೆಯಲ್ಪಟ್ಟು, ಅವರ ಮೇಲೆ ಕಾರು ಚಲಿಸಿದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅಸೈಗೋಳಿ ರಿಕ್ಷಾ ಪಾರ್ಕಿನಲ್ಲಿ ರಿಕ್ಷಾ ಚಲಾಯಿಸುತ್ತಿದ್ದ ಶ್ಯಾಮಪ್ರಸಾದ್ ಕುಟುಂಬದ ಆಧಾರಸ್ತಂಭವಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಇದನ್ನೂ ಓದಿ :ಉಡುಪಿ: ಕೊರೊನಾ ಸೋಂಕು ಹೆಚ್ಚಳ ; ಎಂಐಟಿ ಕ್ಯಾಂಪಸ್ ಸೀಲ್ಡೌನ್ : ಕೆ.ಸುಧಾಕರ್ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…