Missing red rubber stamp vector isolated
ಉಳ್ಳಾಲ: ದೇರಳಕಟ್ಟೆಯ ಖಾಸಗಿ ಕಾಲೇಜಿನ ಪಿಎಚ್ಡಿ ವಿದ್ಯಾರ್ಥಿನಿ ಚೈತ್ರಾ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂ ಕಮಿಷನರ್ ಮಾರ್ಗದರ್ಶನದಲ್ಲಿ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿಗಳನ್ನೊಳಗೊಂಡ ಪೊಲೀಸರ ತಂಡ ಬೆಂಗಳೂರಿನಲ್ಲಿ ತನಿಖೆಯನ್ನು ಚುರುಕುಗೊಳಿಸಿದೆ.
ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಉಳ್ಳಾಲ ಪ್ರಖಂಡ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಮುಖಂಡರು ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತೆ ಧನ್ಯಾ ನಾಯಕ್ ಅವರಿಗೆ ಮನವಿ ಸಲ್ಲಿಸಿದೆ.
ಪಿಎಚ್ಡಿ ಸಂಶೋಧನ ವಿದ್ಯಾರ್ಥಿನಿಯಾಗಿದ್ದ ಚೈತ್ರಾ ಫೆ. 17ರಂದು ಮಾಡೂರಿನ ಬಾಡಿಗೆ ಮನೆಯಿಂದ ಸ್ಕೂಟರ್ನಲ್ಲಿ ಹೊರಟು ಸುರತ್ಕಲ್ನಲ್ಲಿ ಸ್ಕೂಟರ್ ತ್ಯಜಿಸಿ ನಾಪತ್ತೆಯಾಗಿದ್ದಳು. ಆರಂಭದಲ್ಲಿ ಸಾಮಾನ್ಯ ನಾಪತ್ತೆ ಪ್ರಕರಣ ಎಂದು ಪರಿಗಣಿಸಿದ್ದ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿ ಶೋಧ ಕಾರ್ಯ ನಡೆಸಿದ್ದರು. ಆದರೆ ಚೈತ್ರಾ ನಾಪತ್ತೆಯ ಹಿಂದೆ ಡ್ರಗ್ ಪೆಡ್ಲರ್ ಯುವಕನ ಕೈವಾಡವಿದೆ ಎಂದು ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುವ ಬೆದರಿಕೆ ಹಾಕಿದಾಗ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿ ಆಕೆಯ ಮೊಬೈಲ್ ಲೊಕೇಷನ್ ಆಧಾರದಲ್ಲಿ ಬೆಂಗಳೂರು ಕಡೆ ತೆರಳಿರುವ ಮಾಹಿತಿಯನ್ನು ಕಲೆ ಹಾಕಿದ್ದರು. ಈ ನಡುವೆ ಆಕೆ ಮೆಜೆಸ್ಟಿಕ್ನಿಂದ ಬಸ್ ಇಳಿದು ಹೋಗಿರುವ ಮಾಹಿತಿ ಸಿಸಿಟಿವಿಯಲ್ಲಿ ಪತ್ತೆ ಹಚ್ಚಿದ್ದ ಪೊಲೀಸರು ಬೆಂಗಳೂರು ವ್ಯಾಪ್ತಿಯಲ್ಲಿ ಆಕೆಯ ಶೋಧ ಕಾರ್ಯವನ್ನು ಚುರುಕುಗೊಳಿಸಿದ್ದು, ಇನ್ನೆರಡು ದಿನಗಳಲ್ಲಿ ಆಕೆಯನ್ನು ಪತ್ತೆ ಹಚ್ಚುವ ಭರವಸೆಯನ್ನು ಪೊಲೀಸರು ಇಟ್ಟುಕೊಂಡಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…