Featured

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ : ಮಂಗಳೂರು ಪೊಲೀಸ್ ಕಮಿಷನರ್​ಗೆ ಲೋಕಾಯುಕ್ತ ನೋಟಿಸ್  – Vishwanews24

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ : ಮಂಗಳೂರು ಪೊಲೀಸ್ ಕಮಿಷನರ್​ಗೆ ಲೋಕಾಯುಕ್ತ ನೋಟಿಸ್

ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆ ಮಂಗಳೂರು ಪೊಲೀಸ್ ಕಮಿಷನರ್​ಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಲಾಗಿದೆ. ಫೆಬ್ರವರಿ 14ರೊಳಗೆ ತನಿಖಾ ವರದಿ, ದಾಖಲೆ ಸಹಿತ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಉಳ್ಳಾಲ ಪೊಲೀಸ್ ಠಾಣೆಯ ಇನ್ಸ್​​ಪೆಕ್ಟರ್​ ಸಂದೀಪ್​​, ಎಸ್​ಐ ಪ್ರದೀಪ್ ವಿರುದ್ದ ಸಾಮಾಜಿಕ ಕಾರ್ಯಕರ್ತ ಉಳ್ಳಾಲದ ಮೊಹಮ್ಮದ್ ಕಬೀರ್ ಎಂಬುವವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಈ ದೂರಿನ ಆಧಾರದ ಮೇಲೆ ಲೋಕಾಯುಕ್ತರು ಮಂಗಳೂರು ಪೊಲೀಸ್ ಕಮಿಷನರ್​ಗೆ ನೋಟಿಸ್ ನೀಡಿದ್ದಾರೆ. ಹಾಗೂ ತನಿಖಾ ವರದಿ, ದಾಖಲೆ ಸಹಿತ ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ.

 

ಇನ್ಸ್​​ಪೆಕ್ಟರ್​​​, ಎಸ್​ಐ ವಿರುದ್ಧ ಹಣ ವಸೂಲಿ ಸೇರಿ ಹಲವು ಆರೋಪಗಳನ್ನು ಕಬೀರ್ ಮಾಡಿದ್ದಾರೆ. ಬ್ರೋಕರ್​​ ಹಮೀದ್ ಎಂಬುವನ ಮೂಲಕ ಹಣ ವಸೂಲಿ ಆರೋಪ. ಗಾಂಜಾ ಮಾಫಿಯಾ, ಮರಳು ಮಾಫಿಯಾಗಳಿಂದ ಹಣ ವಸೂಲಿ. ಹೋಟೆಲ್​ ಮಾಲೀಕರಿಗೆ ಹಣಕ್ಕೆ ಬೇಡಿಕೆ ಇಟ್ಟ ಆರೋಪ. ಹಾಗೂ ಇಬ್ಬರು ಅಧಿಕಾರಿಗಳು ಉಳ್ಳಾಲಕ್ಕೆ ಬಂದ ಬಳಿಕ ಕೋಟ್ಯಂತರ ಸಂಪಾದನೆ ಮಾಡಿದ್ದಾರೆ. ಚಿನ್ನದ ಅಂಗಡಿ ದರೋಡೆ ಕೇಸ್​ನಲ್ಲಿ ಜಪ್ತಿ ಮಾಡಿದ ಚಿನ್ನ ಮತ್ತು ಬೆಳ್ಳಿಯನ್ನು ಇನ್ಸ್ ಪೆಕ್ಟರ್ ಸಂದೀಪ್ ಎಗರಿಸಿದ್ದಾರೆ ಎಂದು ದೂರಿನಲ್ಲಿ ಕಬೀರ್ ಉಲ್ಲೇಖಿಸಿದ್ದಾರೆ. ಹಾಗೂ ಮಂಗಳೂರು ಪೊಲೀಸ್​ ಕಮಿಷನರ್ ವಿರುದ್ಧವೂ ಆರೋಪ ಮಾಡಿದ್ದಾರೆ. ಕಮಿಷನರ್ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡಿಲ್ಲ ಎಂದು ಆರೋಪ ಮಾಡಿದ್ದಾರೆ. ಈ ಬಗ್ಗೆ ಲೋಕಾಯುಕ್ತರಿಗೆ ಮೊಹಮ್ಮದ್ ಕಬೀರ್ ದೂರು ನೀಡಿದ್ದಾರೆ.

ಕರ್ನಾಟಕ ಲೋಕಾಯುಕ್ತ ಕಲಂ.9 ರಡಿಯಲ್ಲಿ ತನಿಖೆ ನಡೆಸುವುದು ಸೂಕ್ತ ಎಂದು ಕರ್ನಾಟಕ ಲೋಕಾಯುಕ್ತ ನೋಟಿಸ್ ನೀಡಿದ್ದು 2023ರ ಫೆ.14 ರ ಒಳಗೆ ಸೂಕ್ತ ದಾಖಲೆಗಳೊಂದಿಗೆ ಹಾಜರಾಗಲು ಪೊಲೀಸ್ ಕಮೀಷನರ್ ಶಶಿಕುಮಾರ್ ಗೆ ನೋಟಿಸ್ ಜಾರಿ ಮಾಡಿದ್ದಾರೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago