Featured

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ : ಮಂಗಳೂರು ಪೊಲೀಸ್ ಕಮಿಷನರ್​ಗೆ ಲೋಕಾಯುಕ್ತ ನೋಟಿಸ್  – Vishwanews24

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ : ಮಂಗಳೂರು ಪೊಲೀಸ್ ಕಮಿಷನರ್​ಗೆ ಲೋಕಾಯುಕ್ತ ನೋಟಿಸ್

ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆ ಮಂಗಳೂರು ಪೊಲೀಸ್ ಕಮಿಷನರ್​ಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಲಾಗಿದೆ. ಫೆಬ್ರವರಿ 14ರೊಳಗೆ ತನಿಖಾ ವರದಿ, ದಾಖಲೆ ಸಹಿತ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಉಳ್ಳಾಲ ಪೊಲೀಸ್ ಠಾಣೆಯ ಇನ್ಸ್​​ಪೆಕ್ಟರ್​ ಸಂದೀಪ್​​, ಎಸ್​ಐ ಪ್ರದೀಪ್ ವಿರುದ್ದ ಸಾಮಾಜಿಕ ಕಾರ್ಯಕರ್ತ ಉಳ್ಳಾಲದ ಮೊಹಮ್ಮದ್ ಕಬೀರ್ ಎಂಬುವವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಈ ದೂರಿನ ಆಧಾರದ ಮೇಲೆ ಲೋಕಾಯುಕ್ತರು ಮಂಗಳೂರು ಪೊಲೀಸ್ ಕಮಿಷನರ್​ಗೆ ನೋಟಿಸ್ ನೀಡಿದ್ದಾರೆ. ಹಾಗೂ ತನಿಖಾ ವರದಿ, ದಾಖಲೆ ಸಹಿತ ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ.

 

ಇನ್ಸ್​​ಪೆಕ್ಟರ್​​​, ಎಸ್​ಐ ವಿರುದ್ಧ ಹಣ ವಸೂಲಿ ಸೇರಿ ಹಲವು ಆರೋಪಗಳನ್ನು ಕಬೀರ್ ಮಾಡಿದ್ದಾರೆ. ಬ್ರೋಕರ್​​ ಹಮೀದ್ ಎಂಬುವನ ಮೂಲಕ ಹಣ ವಸೂಲಿ ಆರೋಪ. ಗಾಂಜಾ ಮಾಫಿಯಾ, ಮರಳು ಮಾಫಿಯಾಗಳಿಂದ ಹಣ ವಸೂಲಿ. ಹೋಟೆಲ್​ ಮಾಲೀಕರಿಗೆ ಹಣಕ್ಕೆ ಬೇಡಿಕೆ ಇಟ್ಟ ಆರೋಪ. ಹಾಗೂ ಇಬ್ಬರು ಅಧಿಕಾರಿಗಳು ಉಳ್ಳಾಲಕ್ಕೆ ಬಂದ ಬಳಿಕ ಕೋಟ್ಯಂತರ ಸಂಪಾದನೆ ಮಾಡಿದ್ದಾರೆ. ಚಿನ್ನದ ಅಂಗಡಿ ದರೋಡೆ ಕೇಸ್​ನಲ್ಲಿ ಜಪ್ತಿ ಮಾಡಿದ ಚಿನ್ನ ಮತ್ತು ಬೆಳ್ಳಿಯನ್ನು ಇನ್ಸ್ ಪೆಕ್ಟರ್ ಸಂದೀಪ್ ಎಗರಿಸಿದ್ದಾರೆ ಎಂದು ದೂರಿನಲ್ಲಿ ಕಬೀರ್ ಉಲ್ಲೇಖಿಸಿದ್ದಾರೆ. ಹಾಗೂ ಮಂಗಳೂರು ಪೊಲೀಸ್​ ಕಮಿಷನರ್ ವಿರುದ್ಧವೂ ಆರೋಪ ಮಾಡಿದ್ದಾರೆ. ಕಮಿಷನರ್ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡಿಲ್ಲ ಎಂದು ಆರೋಪ ಮಾಡಿದ್ದಾರೆ. ಈ ಬಗ್ಗೆ ಲೋಕಾಯುಕ್ತರಿಗೆ ಮೊಹಮ್ಮದ್ ಕಬೀರ್ ದೂರು ನೀಡಿದ್ದಾರೆ.

ಕರ್ನಾಟಕ ಲೋಕಾಯುಕ್ತ ಕಲಂ.9 ರಡಿಯಲ್ಲಿ ತನಿಖೆ ನಡೆಸುವುದು ಸೂಕ್ತ ಎಂದು ಕರ್ನಾಟಕ ಲೋಕಾಯುಕ್ತ ನೋಟಿಸ್ ನೀಡಿದ್ದು 2023ರ ಫೆ.14 ರ ಒಳಗೆ ಸೂಕ್ತ ದಾಖಲೆಗಳೊಂದಿಗೆ ಹಾಜರಾಗಲು ಪೊಲೀಸ್ ಕಮೀಷನರ್ ಶಶಿಕುಮಾರ್ ಗೆ ನೋಟಿಸ್ ಜಾರಿ ಮಾಡಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

14 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago