Featured

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ : ಮಂಗಳೂರು ಪೊಲೀಸ್ ಕಮಿಷನರ್​ಗೆ ಲೋಕಾಯುಕ್ತ ನೋಟಿಸ್  – Vishwanews24

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ : ಮಂಗಳೂರು ಪೊಲೀಸ್ ಕಮಿಷನರ್​ಗೆ ಲೋಕಾಯುಕ್ತ ನೋಟಿಸ್

ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆ ಮಂಗಳೂರು ಪೊಲೀಸ್ ಕಮಿಷನರ್​ಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಲಾಗಿದೆ. ಫೆಬ್ರವರಿ 14ರೊಳಗೆ ತನಿಖಾ ವರದಿ, ದಾಖಲೆ ಸಹಿತ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಉಳ್ಳಾಲ ಪೊಲೀಸ್ ಠಾಣೆಯ ಇನ್ಸ್​​ಪೆಕ್ಟರ್​ ಸಂದೀಪ್​​, ಎಸ್​ಐ ಪ್ರದೀಪ್ ವಿರುದ್ದ ಸಾಮಾಜಿಕ ಕಾರ್ಯಕರ್ತ ಉಳ್ಳಾಲದ ಮೊಹಮ್ಮದ್ ಕಬೀರ್ ಎಂಬುವವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಈ ದೂರಿನ ಆಧಾರದ ಮೇಲೆ ಲೋಕಾಯುಕ್ತರು ಮಂಗಳೂರು ಪೊಲೀಸ್ ಕಮಿಷನರ್​ಗೆ ನೋಟಿಸ್ ನೀಡಿದ್ದಾರೆ. ಹಾಗೂ ತನಿಖಾ ವರದಿ, ದಾಖಲೆ ಸಹಿತ ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ.

 

ಇನ್ಸ್​​ಪೆಕ್ಟರ್​​​, ಎಸ್​ಐ ವಿರುದ್ಧ ಹಣ ವಸೂಲಿ ಸೇರಿ ಹಲವು ಆರೋಪಗಳನ್ನು ಕಬೀರ್ ಮಾಡಿದ್ದಾರೆ. ಬ್ರೋಕರ್​​ ಹಮೀದ್ ಎಂಬುವನ ಮೂಲಕ ಹಣ ವಸೂಲಿ ಆರೋಪ. ಗಾಂಜಾ ಮಾಫಿಯಾ, ಮರಳು ಮಾಫಿಯಾಗಳಿಂದ ಹಣ ವಸೂಲಿ. ಹೋಟೆಲ್​ ಮಾಲೀಕರಿಗೆ ಹಣಕ್ಕೆ ಬೇಡಿಕೆ ಇಟ್ಟ ಆರೋಪ. ಹಾಗೂ ಇಬ್ಬರು ಅಧಿಕಾರಿಗಳು ಉಳ್ಳಾಲಕ್ಕೆ ಬಂದ ಬಳಿಕ ಕೋಟ್ಯಂತರ ಸಂಪಾದನೆ ಮಾಡಿದ್ದಾರೆ. ಚಿನ್ನದ ಅಂಗಡಿ ದರೋಡೆ ಕೇಸ್​ನಲ್ಲಿ ಜಪ್ತಿ ಮಾಡಿದ ಚಿನ್ನ ಮತ್ತು ಬೆಳ್ಳಿಯನ್ನು ಇನ್ಸ್ ಪೆಕ್ಟರ್ ಸಂದೀಪ್ ಎಗರಿಸಿದ್ದಾರೆ ಎಂದು ದೂರಿನಲ್ಲಿ ಕಬೀರ್ ಉಲ್ಲೇಖಿಸಿದ್ದಾರೆ. ಹಾಗೂ ಮಂಗಳೂರು ಪೊಲೀಸ್​ ಕಮಿಷನರ್ ವಿರುದ್ಧವೂ ಆರೋಪ ಮಾಡಿದ್ದಾರೆ. ಕಮಿಷನರ್ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡಿಲ್ಲ ಎಂದು ಆರೋಪ ಮಾಡಿದ್ದಾರೆ. ಈ ಬಗ್ಗೆ ಲೋಕಾಯುಕ್ತರಿಗೆ ಮೊಹಮ್ಮದ್ ಕಬೀರ್ ದೂರು ನೀಡಿದ್ದಾರೆ.

ಕರ್ನಾಟಕ ಲೋಕಾಯುಕ್ತ ಕಲಂ.9 ರಡಿಯಲ್ಲಿ ತನಿಖೆ ನಡೆಸುವುದು ಸೂಕ್ತ ಎಂದು ಕರ್ನಾಟಕ ಲೋಕಾಯುಕ್ತ ನೋಟಿಸ್ ನೀಡಿದ್ದು 2023ರ ಫೆ.14 ರ ಒಳಗೆ ಸೂಕ್ತ ದಾಖಲೆಗಳೊಂದಿಗೆ ಹಾಜರಾಗಲು ಪೊಲೀಸ್ ಕಮೀಷನರ್ ಶಶಿಕುಮಾರ್ ಗೆ ನೋಟಿಸ್ ಜಾರಿ ಮಾಡಿದ್ದಾರೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

11 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

15 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

17 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

19 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

19 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

19 hours ago