Featured

ಉಳ್ಳಾಲ: ಬಯಸಿದ್ದು ಎಲ್ಲರಿಗೂ ಸಿಗೋದು ಕಡಿಮೆ ಆದರೆ ಭಗವಂತ ನನಗೆ ಬಯಸಿದ್ದನ್ನೇ ಕೊಟ್ಟಿದ್ದಾನೆ : ನಟ ವಶಿಷ್ಟ ಸಿಂಹ -Vishwanews24

ಉಳ್ಳಾಲ: ಬಯಸಿದ್ದು ಎಲ್ಲರಿಗೂ ಸಿಗೋದು ಕಡಿಮೆ ಆದರೆ ಭಗವಂತ ನನಗೆ ಬಯಸಿದ್ದನ್ನೇ ಕೊಟ್ಟಿದ್ದಾನೆ : ನಟ ವಶಿಷ್ಟ ಸಿಂಹ

ಉಳ್ಳಾಲ: ಬಯಸಿದ್ದು ಎಲ್ಲರಿಗೂ ಸಿಗೋದು ಕಡಿಮೆ, ಆದರೆ ಹಲವು ವರ್ಷಗಳ ಪ್ರೀತಿ ಹರಿಪ್ರಿಯಾಳನ್ನು ಭಗವಂತ ಕೊಟ್ಟಿದ್ದಾನೆ. ಅದಕ್ಕೆ ಚಿರ ಋಣಿ . ನವದಂಪತಿಯ ಮೊದಲ ದಸರಾ ಹಬ್ಬವಾಗಿದೆ. ಕೃತಜ್ಞತಾಪೂರ್ವವಾಗಿ ಕೊರಗಜ್ಜನ ಕ್ಷೇತ್ರಕ್ಕೆ ದಂಪತಿ ಸಮೇತ ಭೇಟಿ ನೀಡಿದ್ದೇವೆ ಎಂದು ನಟ ಹಾಗೂ ಹಿನ್ನೆಲೆ ಗಾಯಕ ವಶಿಷ್ಠ ನಿರಂಜನ್ ಸಿಂಹ ಹೇಳಿದರು.

ವಶಿಷ್ಠ ಹಾಗೂ ನಟಿ ಹರಿಪ್ರಿಯ ದಂಪತಿ ಕಲ್ಲಾಪು ಬುರ್ದುಗೋಳಿ ಕ್ಷೇತ್ರಕ್ಕೆ ಭೇಟಿ ನೀಡಿ ಕೊರಗತನಿಯನ ಸನ್ನಿಧಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ದ.ಕ ಜಿಲ್ಲೆಗೆ ಬಂದಾಗ ಕೊರಗಜ್ಜನ ದರ್ಶನ ಮಾಡದೇ ಇದ್ದಲ್ಲಿ ವಾಪಸ್ಸು ತೆರಳುವಾಗ ಹೊರೆ ಹೊತ್ತಂಥ ಅನುಭವ ಆಗುತ್ತೆ. ಮುಂದೆ ಲವ್ಲೀ ಚಿತ್ರ ಬಿಡುಗಡೆಯಾಗಲಿದ್ದು, ಬಹುತೇಕ ಶೂಟಿಂಗ್ ದ.ಕ ಜಿಲ್ಲೆಯಲ್ಲೇ ಆಗಿದೆ. ಶೂಟಿಂಗ್ ನಡೆದ ದೇವಸ್ಥಾನ ಕ್ಕೆ ಭೇಟಿ ನೀಡಲು ಬಯಸಿದ್ದೆ, ಸಾಧ್ಯವಾಗಿರಲಿಲ್ಲ. ಈಗ ಶೂಟಿಂಗ್ ನಿಂದ ಸಾಧ್ಯವಾಯಿತು ಎಂದರು .

ನಟಿ ಹರಿಪ್ರಿಯಾ ಮಾತನಾಡಿ, ತನ್ನ ಮೊದಲ ನಟನೆ ಕರಾವಳಿಯಿಂದಲೇ ಆರಂಭವಾಯಿತು. ಬದಿ ಅನ್ನುವ ತುಳು ಚಿತ್ರದಲ್ಲಿ ಪ್ರಥಮವಾಗಿ ನಟಿಸಿದ್ದೆನು. ದಸರಾ ವಾರ ವಿಶೇಷಣವಾಗಿತ್ತು. ವಶಿಷ್ಠರ ಹುಟ್ಟುಹಬ್ಬವನ್ನು ಇಲ್ಲೇ ಆಚರಿಸಿದ್ದು, ನಾನೇ ಅವರಿಗೆ ಹುಟ್ಟುಹಬ್ಬದ ಗಿಫ್ಟ್ ಆಗಿರುವೆ. ವಾರದುದ್ದಕ್ಕೂ ಕರಾವಳಿಯ ಎಲ್ಲಾ ದೇವಸ್ಥಾನಗಳ ಸಂದರ್ಶನ ನಡೆಸಿ ಕೃತಾರ್ಥರಾದೆವು ಎಂದರು.

ಈ ಸಂದರ್ಭದಲ್ಲಿ ಕದ್ರಿ ಕ್ರಿಕೆಟರ್ಸ್ ನ ಜಗದೀಶ್ ಕದ್ರಿ, ಕುಂಪಲ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿಯ ಅಧ್ಯಕ್ಷ ಗಣೇಶ್ ಅಂಚನ್, ಸಾಯಿ ಪರಿವಾರ್ ಟ್ರಸ್ಟ್ ನ ಪ್ರವೀಣ್ ಎಸ್ ಕುಂಪಲ, ಬುರ್ದುಗೋಳಿ ಸಮಿತಿಯ ಕಮಲಾಕ್ಷ ವಿ ಕುಲಾಲ್, ನವೀನ್ ಕಾಯಂಗಳ, ಪುರುಷೋತ್ತಮ ಮೇಲಾಂಟ, ಪ್ರಶಾಂತ್ ಕಾಯಂಗಳ, ಪುರುಷೋತ್ತಮ ಕಲ್ಲಾಪು, ರವಿ, ಜ್ಞಾನೇಶ್ ಸಂಜಯ್, ಭವಿತ್, ತೊಕ್ಕೊಟ್ಟು ಸಾಯಿ ಪರಿವಾರ್ ಟ್ರಸ್ಟ್ ನ ಕೌಶಿಕ್ ಸೇವಂತಿಗುಡ್ಡೆ, ಶವಿತ್ ಉಚ್ಚಿಲ್, ಪ್ರಜ್ವಲ್, ಭವಿಶ್ ಕುತ್ತಾರ್, ಮುಂತಾದವರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago