Featured

ಉಳ್ಳಾಲ: ಬಯಸಿದ್ದು ಎಲ್ಲರಿಗೂ ಸಿಗೋದು ಕಡಿಮೆ ಆದರೆ ಭಗವಂತ ನನಗೆ ಬಯಸಿದ್ದನ್ನೇ ಕೊಟ್ಟಿದ್ದಾನೆ : ನಟ ವಶಿಷ್ಟ ಸಿಂಹ -Vishwanews24

ಉಳ್ಳಾಲ: ಬಯಸಿದ್ದು ಎಲ್ಲರಿಗೂ ಸಿಗೋದು ಕಡಿಮೆ ಆದರೆ ಭಗವಂತ ನನಗೆ ಬಯಸಿದ್ದನ್ನೇ ಕೊಟ್ಟಿದ್ದಾನೆ : ನಟ ವಶಿಷ್ಟ ಸಿಂಹ

ಉಳ್ಳಾಲ: ಬಯಸಿದ್ದು ಎಲ್ಲರಿಗೂ ಸಿಗೋದು ಕಡಿಮೆ, ಆದರೆ ಹಲವು ವರ್ಷಗಳ ಪ್ರೀತಿ ಹರಿಪ್ರಿಯಾಳನ್ನು ಭಗವಂತ ಕೊಟ್ಟಿದ್ದಾನೆ. ಅದಕ್ಕೆ ಚಿರ ಋಣಿ . ನವದಂಪತಿಯ ಮೊದಲ ದಸರಾ ಹಬ್ಬವಾಗಿದೆ. ಕೃತಜ್ಞತಾಪೂರ್ವವಾಗಿ ಕೊರಗಜ್ಜನ ಕ್ಷೇತ್ರಕ್ಕೆ ದಂಪತಿ ಸಮೇತ ಭೇಟಿ ನೀಡಿದ್ದೇವೆ ಎಂದು ನಟ ಹಾಗೂ ಹಿನ್ನೆಲೆ ಗಾಯಕ ವಶಿಷ್ಠ ನಿರಂಜನ್ ಸಿಂಹ ಹೇಳಿದರು.

ವಶಿಷ್ಠ ಹಾಗೂ ನಟಿ ಹರಿಪ್ರಿಯ ದಂಪತಿ ಕಲ್ಲಾಪು ಬುರ್ದುಗೋಳಿ ಕ್ಷೇತ್ರಕ್ಕೆ ಭೇಟಿ ನೀಡಿ ಕೊರಗತನಿಯನ ಸನ್ನಿಧಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ದ.ಕ ಜಿಲ್ಲೆಗೆ ಬಂದಾಗ ಕೊರಗಜ್ಜನ ದರ್ಶನ ಮಾಡದೇ ಇದ್ದಲ್ಲಿ ವಾಪಸ್ಸು ತೆರಳುವಾಗ ಹೊರೆ ಹೊತ್ತಂಥ ಅನುಭವ ಆಗುತ್ತೆ. ಮುಂದೆ ಲವ್ಲೀ ಚಿತ್ರ ಬಿಡುಗಡೆಯಾಗಲಿದ್ದು, ಬಹುತೇಕ ಶೂಟಿಂಗ್ ದ.ಕ ಜಿಲ್ಲೆಯಲ್ಲೇ ಆಗಿದೆ. ಶೂಟಿಂಗ್ ನಡೆದ ದೇವಸ್ಥಾನ ಕ್ಕೆ ಭೇಟಿ ನೀಡಲು ಬಯಸಿದ್ದೆ, ಸಾಧ್ಯವಾಗಿರಲಿಲ್ಲ. ಈಗ ಶೂಟಿಂಗ್ ನಿಂದ ಸಾಧ್ಯವಾಯಿತು ಎಂದರು .

ನಟಿ ಹರಿಪ್ರಿಯಾ ಮಾತನಾಡಿ, ತನ್ನ ಮೊದಲ ನಟನೆ ಕರಾವಳಿಯಿಂದಲೇ ಆರಂಭವಾಯಿತು. ಬದಿ ಅನ್ನುವ ತುಳು ಚಿತ್ರದಲ್ಲಿ ಪ್ರಥಮವಾಗಿ ನಟಿಸಿದ್ದೆನು. ದಸರಾ ವಾರ ವಿಶೇಷಣವಾಗಿತ್ತು. ವಶಿಷ್ಠರ ಹುಟ್ಟುಹಬ್ಬವನ್ನು ಇಲ್ಲೇ ಆಚರಿಸಿದ್ದು, ನಾನೇ ಅವರಿಗೆ ಹುಟ್ಟುಹಬ್ಬದ ಗಿಫ್ಟ್ ಆಗಿರುವೆ. ವಾರದುದ್ದಕ್ಕೂ ಕರಾವಳಿಯ ಎಲ್ಲಾ ದೇವಸ್ಥಾನಗಳ ಸಂದರ್ಶನ ನಡೆಸಿ ಕೃತಾರ್ಥರಾದೆವು ಎಂದರು.

ಈ ಸಂದರ್ಭದಲ್ಲಿ ಕದ್ರಿ ಕ್ರಿಕೆಟರ್ಸ್ ನ ಜಗದೀಶ್ ಕದ್ರಿ, ಕುಂಪಲ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿಯ ಅಧ್ಯಕ್ಷ ಗಣೇಶ್ ಅಂಚನ್, ಸಾಯಿ ಪರಿವಾರ್ ಟ್ರಸ್ಟ್ ನ ಪ್ರವೀಣ್ ಎಸ್ ಕುಂಪಲ, ಬುರ್ದುಗೋಳಿ ಸಮಿತಿಯ ಕಮಲಾಕ್ಷ ವಿ ಕುಲಾಲ್, ನವೀನ್ ಕಾಯಂಗಳ, ಪುರುಷೋತ್ತಮ ಮೇಲಾಂಟ, ಪ್ರಶಾಂತ್ ಕಾಯಂಗಳ, ಪುರುಷೋತ್ತಮ ಕಲ್ಲಾಪು, ರವಿ, ಜ್ಞಾನೇಶ್ ಸಂಜಯ್, ಭವಿತ್, ತೊಕ್ಕೊಟ್ಟು ಸಾಯಿ ಪರಿವಾರ್ ಟ್ರಸ್ಟ್ ನ ಕೌಶಿಕ್ ಸೇವಂತಿಗುಡ್ಡೆ, ಶವಿತ್ ಉಚ್ಚಿಲ್, ಪ್ರಜ್ವಲ್, ಭವಿಶ್ ಕುತ್ತಾರ್, ಮುಂತಾದವರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago