Featured

ಉಳ್ಳಾಲ : ಬಸ್ ನಲ್ಲಿ ಕಳೆದು ಹೋದ 18 ಗ್ರಾಂ ಚಿನ್ನದ ಬಳೆ ಮಹಿಳೆಗೆ ವಾಪಸ್ , ಪ್ರಾಮಾಣಿಕತೆ ಮೆರೆದ ಸಿಟಿ ಬಸ್ ಸಿಬ್ಬಂದಿ – Vishwanews24

ಉಳ್ಳಾಲ : ಬಸ್ ನಲ್ಲಿ ಕಳೆದು ಹೋದ 18 ಗ್ರಾಂ ಚಿನ್ನದ ಬಳೆ ಮಹಿಳೆಗೆ ವಾಪಸ್ , ಪ್ರಾಮಾಣಿಕತೆ ಮೆರೆದ ಸಿಟಿ ಬಸ್ ಸಿಬ್ಬಂದಿ

ಉಳ್ಳಾಲ: ಬಸ್ ನಲ್ಲಿ ಕಳೆದುಹೋದ 18 ಗ್ರಾಂ ಚಿನ್ನದ ಬಳೆಯನ್ನು ಬಸ್ ನಿರ್ವಾಹಕ ಹಾಗೂ ಚಾಲಕ ಮಾಲೀಕರ ಸಹಕಾರದೊಂದಿಗೆ ಪೊಲೀಸರಿಗೆ ವಾಪಸ್ಸು ಮಾಡಿ ಪ್ರಾಮಾಣಿಕತೆ ಮೆರೆದ ಘಟನೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಜ.1 ರಂದು ಮಂಗಳೂರಿನಿಂದ ಉಳ್ಳಾಲ ಕಡೆಗೆ ಶಾಲಿಮಾರ್ 44ಸಿ ಬಸ್ಸಿನಲ್ಲಿ ಬಿಸಿರೋಡ್ ಮೂಲದ ಮಹಿಳೆ ತಸ್ಲಿಮಾ ಪ್ರಯಾಣಿಸುತ್ತಿರುವಾಗ 18 ಗ್ರಾಂ ತೂಕದ ಚಿನ್ನದ ಬಳೆಯನ್ನು ಕಳೆದುಕೊಂಡಿದ್ದರು.ಉಳ್ಳಾಲದ ತಾಜ್ ಮಹಲ್ ಸಭಾಂಗಣದಲ್ಲಿ ಮದುವೆ ಸಮಾರಂಭಕ್ಕೆ ತೆರಳುವಾಗ ಘಟನೆ ನಡೆದಿತ್ತು.

ಬಸ್ ನಲ್ಲಿ ಸಿಕ್ಕ ಬಂಗಾರದ ಬಳೆಯನ್ನು ಬಸ್ ಚಾಲಕ ನಿಸಾರ್ ಅಹಮ್ಮದ್ ಹಾಗೂ ನಿರ್ವಾಹಕ ಇಬ್ರಾಹಿಂ ಮಂಜನಾಡಿ ಇಬ್ಬರು ಬಸ್ ಮಾಲೀಕ ಅಬ್ದುಲ್ ರಝಾಕ್ ಎಂಬವರ ಗಮನಕ್ಕೆ ತಂದಿದ್ದರು. ಅವರು ಜ.2 ರಂದು ಉಳ್ಳಾಲ ಪೊಲೀಸ್ ಠಾಣೆಗೆ ಆಗಮಿಸಿ ಚಿನ್ನವನ್ನು ನೀಡಿ ಪ್ರಾಮಾಣಿಕತನ ಮೆರೆದರು.

ಇದೇ ಸಂದರ್ಭ ಚಿನ್ನ ಕಳೆದುಕೊಂಡ ಮಹಿಳೆ ತಸ್ಲೀಮಾ ಅವರು ಠಾಣೆಗೆ ಆಗಮಿಸಿದ್ದು, ಅವರಿಗೆ ಎಸ್. ಐ ಶಿವು ಕುಮಾರ್ ಸಮ್ಮುಖದಲ್ಲಿ ಕಳೆದುಹೋದ ಚಿನ್ನವನ್ನು ವಾಪಸ್ಸು ನೀಡಲಾಯಿತು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

20 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

20 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago