ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ನಗರದ ಇಬ್ಬರು ಹಾಗೂ ಕೇರಳ ಮೂಲದ ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಸೋಮವಾರ ಮುಡಿಪು ಬಳಿಯ ಅಪಾರ್ಟ್ಮೆಂಟ್ನಲ್ಲಿ ಗೊಂದಲಮಯ ವಾತಾವರಣ ನಿರ್ಮಾಣವಾಗಿದ್ದು, ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಫ್ಲಾಟ್ಗೆ ಭೇಟಿ ನೀಡಿ ಪರಿಶೀಲಿಸಿದರು. ಅಪ್ರಾಪ್ತ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೋಕ್ಸೊ ಕಾಯ್ದೆಯಡಿ ಅಡಿ ಪ್ರಕರಣ ದಾಖಲಿಸಲಾಗಿದೆ.
ತನ್ನ ಅಪ್ರಾಪ್ತ ಬಾಲಕಿಗೆ ಅಲ್ಕೋಹಾಲ್ ಕುಡಿಸಿ, ಅಮಲು ಪದಾರ್ಥಗಳನ್ನು ನೀಡಿ ನಂತರ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಬಾಲಕಿಯ ತಾಯಿ ದೂರು ನೀಡಿದ್ದಾರೆ. ಕೌನ್ಸೆಲಿಂಗ್ಗಾಗಿ ಬಾಲಕಿಯನ್ನು ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಬಂಧಿತರಲ್ಲಿ ಈಗಾಗಲೇ ಒಬ್ಬ ಆರೋಪಿ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಚಿಲಿಂಬಿಗುಡ್ಡೆಯಲ್ಲಿ ಪೋಕ್ಸೋ ಪ್ರಕರಣದ ಆರೋಪಿಯಾಗಿದ್ದಾನೆ. ಮಾತ್ರವಲ್ಲದೆ ನಾಗ ಬನ ಧ್ವಂಸ ಮಾಡಿದ ಆರೋಪ ಎದುರಿಸುತ್ತಿರುವ ವ್ಯಕ್ತಿಗಳಿಗೆ ಬೆಂಬಲವನ್ನೂ ನೀಡಿದ್ದ. ಈತನ ಮೇಲೆ ಈಗಾಗಲೇ ಎರಡು ಪೋಕ್ಸೊ ಪ್ರಕರಣಗಳು, ದರೋಡೆ ಮತ್ತು ಎನ್ಡಿಪಿಎಸ್ ಕಾಯ್ದೆಯಡಿ 5 ಪೊಲೀಸ್ ಠಾಣೆಯಲ್ಲಿಏಳು ಪ್ರಕರಣಗಳಿವೆ ಎಂದು ಕಮಿಷನರ್ ತಿಳಿಸಿದ್ದಾರೆ
ಚಿಲಿಂಬಿಗುಡ್ಡೆಯಲ್ಲಿ ನಡೆದ ಪ್ರಕರಣವೊಂದರಲ್ಲಿ ಬಾಲಕಿಯನ್ನು ಚುಡಾಯಿಸಲಾಗಿತ್ತು. ಈ ಸಂಬಂಧ ಆಕೆ ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ ಹೆಡ್ಕಾನ್ಸ್ಟೇಬಲ್ಯೊಬ್ಬರು ಆಕೆಯ ಫೋನ್ ನಂಬರ್ ಪಡೆದು ಕೆಟ್ಟ ಸಂದೇಶಗಳನ್ನು ಹಂಚಿಕೊಂಡಿದ್ದರು. ಈತನನ್ನು ವಶಕ್ಕೆ ಪಡೆದು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…