Featured

ಉಳ್ಳಾಲ : ಬೆಡ್ ಮೇಲೆ ಇಸ್ತ್ರೀ ಪೆಟ್ಟಿಗೆ ಇಟ್ಟು ಹೋದ ವಿದ್ಯಾರ್ಥಿನಿಯರು : ಅಪಾರ್ಟ್ ಮೆಂಟ್ ಮ್ಯಾನೆಜರ್ ಸಮಯ ಪ್ರಜ್ಞೆಯಿಂದ ತಪ್ಪಿದ ಬೆಂಕಿ ಅವಘಡ – Vishwanews24

ಉಳ್ಳಾಲ : ಬೆಡ್ ಮೇಲೆ ಇಸ್ತ್ರೀ ಪೆಟ್ಟಿಗೆ  ಇಟ್ಟು ಹೋದ ವಿದ್ಯಾರ್ಥಿನಿಯರು :: ಅಪಾರ್ಟ್ ಮೆಂಟ್ ಮ್ಯಾನೆಜರ್ ಸಮಯ ಪ್ರಜ್ಞೆಯಿಂದ ತಪ್ಪಿದ ಬೆಂಕಿ ಅವಘಡ

ಉಳ್ಳಾಲ : ಪ್ಲ್ಯಾಟ್ ಒಂದರಲ್ಲಿ ಬಟ್ಟೆಗಳಿಗೆ ಇಸ್ತ್ರೀ ಹಾಕಿದ ಬಳಿಕ ಇಸ್ತ್ರೀ ಪೆಟ್ಟಿಗೆಯನ್ನು ಬೆಡ್ ಮೇಲೆ ಆನ್ ಮಾಡಿ ವಿದ್ಯಾರ್ಥಿನಿಯರು ಇಟ್ಟು ಹೋದ ಪರಿಣಾಮ ಬೆಂಕಿ ಅವಘಡ ಸಂಭವಿಸಿದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ.

ದೇರಳಕಟ್ಟೆಯಲ್ಲಿರುವ 13 ಮಹಡಿಗಳ ಪ್ಲ್ಯಾಟ್ ಒಂದರಲ್ಲಿ ಈ ಘಟನೆ ನಡೆದಿದ್ದು, ಫ್ಲ್ಯಾಟ್‌ವೊಂದರ 202 ನಂಬರಿನ ರೂಮಿನಲ್ಲಿ ದಂತ ವೈದ್ಯಕೀಯ ಕಲಿಯುವ ಇಬ್ಬರು ವಿದ್ಯಾರ್ಥಿನಿಯರಿದ್ದು, ಡಿಸೆಂಬರ್ 2೦ ರ ಬೆಳಿಗ್ಗೆ ಕಾಲೇಜಿನಲ್ಲಿ ಕಾರ್ಯಾಗಾರವಿದೆಯೆಂದು ಬೇಗನೇ ತೆರಳಿದ್ದರು. ಆದರೆ ಆತುರದಲ್ಲಿ ಬಟ್ಟೆಗಳಿಗೆ ಇಸ್ತ್ರಿ ಹಾಕಿರುವ ವಿದ್ಯಾರ್ಥಿನಿಯರು, ಸ್ವಿಚ್ ಆಫ್ ಮಾಡಿದರೂ, ಇಸ್ತ್ರಿಪೆಟ್ಟಿಗೆಯನ್ನು ಮಲಗುವ ಬೆಡ್ ನಲ್ಲಿರಿಸಿ ಕಾಲೇಜಿಗೆ ತೆರಳಿದ್ದರು. ಆದರೆ ಬೆಳಗ್ಗಿನಿಂದ ಹೊಗೆಯ ವಾಸನೆ ಫ್ಲ್ಯಾಟ್ ತುಂಬಾ ಬರುತ್ತಿದ್ದು, ಮ್ಯಾನೇಜರ್ ಆಗಿರುವ ಕುತ್ತಾರು ನಿವಾಸಿ ಮಹಮ್ಮದ್ ಶಾಹಿದ್ ಶಫೀಕ್ ಹುಡುಕಲು ಆರಂಭಿಸಿದ್ದರು.

ಒಂದು ಗಂಟೆಯ ನಂತರ ರೂಮಿನಲ್ಲಿ ಹೊಗೆ ಬರುತ್ತಿರುವುದು ಗಮನಕ್ಕೆ ಬಂದಿದೆ. ಆದರೆ ರೂಮಿಗೆ ಬೀಗ ಹಾಕಿರುವುದರಿಂದ ತೆರೆಯಲು ಸಾಧ್ಯವಾಗದೆ, ವಿದ್ಯಾರ್ಥಿನಿಯರಿಗೆ ಮೊಬೈಲ್ ಮೂಲಕ ಸಂಪರ್ಕಿಸಿದ್ದಾರೆ. ರೂಮಿನಿಂದ ಹೊಗೆ ಬರುತ್ತಿರುವುದನ್ನು ತಿಳಿಸಿ ತಕ್ಷಣಕ್ಕೆ ವಾಪಸ್ಸು ಬರುವಂತೆ ಸೂಚಿಸಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ತಕ್ಷಣ ಫ್ಲಾಟ್ ನತ್ತ ಆಗಮಿಸಿದ್ದು, ಬೀಗ ತೆರೆಯುವ ಸಂದರ್ಭ ರೂಮಿನೊಳಕ್ಕೆ ದಟ್ಟವಾದ ಹೊಗೆ ಆವರಿಸಿತ್ತು. ಧೈರ್ಯ ಮಾಡಿದ ಮ್ಯಾನೇಜರ್ ಶಫೀಕ್ ನೇರವಾಗಿ ಒಳನುಗ್ಗಿ ಕಿಟಕಿಯನ್ನು ತೆರೆದಿದ್ದಾರೆ. ತಕ್ಷಣ ಬೆಂಕಿ ಆವರಿಸಿದ ಬೆಡ್ ಅನ್ನು ಹೊರಗೆಸೆದು ಅವಘಢವನ್ನು ತಪ್ಪಿಸಿದ್ದಾರೆ.

Vishwa News 24

Recent Posts

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

4 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

20 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

35 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago