ಉಳ್ಳಾಲ : ಪ್ಲ್ಯಾಟ್ ಒಂದರಲ್ಲಿ ಬಟ್ಟೆಗಳಿಗೆ ಇಸ್ತ್ರೀ ಹಾಕಿದ ಬಳಿಕ ಇಸ್ತ್ರೀ ಪೆಟ್ಟಿಗೆಯನ್ನು ಬೆಡ್ ಮೇಲೆ ಆನ್ ಮಾಡಿ ವಿದ್ಯಾರ್ಥಿನಿಯರು ಇಟ್ಟು ಹೋದ ಪರಿಣಾಮ ಬೆಂಕಿ ಅವಘಡ ಸಂಭವಿಸಿದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ.
ದೇರಳಕಟ್ಟೆಯಲ್ಲಿರುವ 13 ಮಹಡಿಗಳ ಪ್ಲ್ಯಾಟ್ ಒಂದರಲ್ಲಿ ಈ ಘಟನೆ ನಡೆದಿದ್ದು, ಫ್ಲ್ಯಾಟ್ವೊಂದರ 202 ನಂಬರಿನ ರೂಮಿನಲ್ಲಿ ದಂತ ವೈದ್ಯಕೀಯ ಕಲಿಯುವ ಇಬ್ಬರು ವಿದ್ಯಾರ್ಥಿನಿಯರಿದ್ದು, ಡಿಸೆಂಬರ್ 2೦ ರ ಬೆಳಿಗ್ಗೆ ಕಾಲೇಜಿನಲ್ಲಿ ಕಾರ್ಯಾಗಾರವಿದೆಯೆಂದು ಬೇಗನೇ ತೆರಳಿದ್ದರು. ಆದರೆ ಆತುರದಲ್ಲಿ ಬಟ್ಟೆಗಳಿಗೆ ಇಸ್ತ್ರಿ ಹಾಕಿರುವ ವಿದ್ಯಾರ್ಥಿನಿಯರು, ಸ್ವಿಚ್ ಆಫ್ ಮಾಡಿದರೂ, ಇಸ್ತ್ರಿಪೆಟ್ಟಿಗೆಯನ್ನು ಮಲಗುವ ಬೆಡ್ ನಲ್ಲಿರಿಸಿ ಕಾಲೇಜಿಗೆ ತೆರಳಿದ್ದರು. ಆದರೆ ಬೆಳಗ್ಗಿನಿಂದ ಹೊಗೆಯ ವಾಸನೆ ಫ್ಲ್ಯಾಟ್ ತುಂಬಾ ಬರುತ್ತಿದ್ದು, ಮ್ಯಾನೇಜರ್ ಆಗಿರುವ ಕುತ್ತಾರು ನಿವಾಸಿ ಮಹಮ್ಮದ್ ಶಾಹಿದ್ ಶಫೀಕ್ ಹುಡುಕಲು ಆರಂಭಿಸಿದ್ದರು.
ಒಂದು ಗಂಟೆಯ ನಂತರ ರೂಮಿನಲ್ಲಿ ಹೊಗೆ ಬರುತ್ತಿರುವುದು ಗಮನಕ್ಕೆ ಬಂದಿದೆ. ಆದರೆ ರೂಮಿಗೆ ಬೀಗ ಹಾಕಿರುವುದರಿಂದ ತೆರೆಯಲು ಸಾಧ್ಯವಾಗದೆ, ವಿದ್ಯಾರ್ಥಿನಿಯರಿಗೆ ಮೊಬೈಲ್ ಮೂಲಕ ಸಂಪರ್ಕಿಸಿದ್ದಾರೆ. ರೂಮಿನಿಂದ ಹೊಗೆ ಬರುತ್ತಿರುವುದನ್ನು ತಿಳಿಸಿ ತಕ್ಷಣಕ್ಕೆ ವಾಪಸ್ಸು ಬರುವಂತೆ ಸೂಚಿಸಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ತಕ್ಷಣ ಫ್ಲಾಟ್ ನತ್ತ ಆಗಮಿಸಿದ್ದು, ಬೀಗ ತೆರೆಯುವ ಸಂದರ್ಭ ರೂಮಿನೊಳಕ್ಕೆ ದಟ್ಟವಾದ ಹೊಗೆ ಆವರಿಸಿತ್ತು. ಧೈರ್ಯ ಮಾಡಿದ ಮ್ಯಾನೇಜರ್ ಶಫೀಕ್ ನೇರವಾಗಿ ಒಳನುಗ್ಗಿ ಕಿಟಕಿಯನ್ನು ತೆರೆದಿದ್ದಾರೆ. ತಕ್ಷಣ ಬೆಂಕಿ ಆವರಿಸಿದ ಬೆಡ್ ಅನ್ನು ಹೊರಗೆಸೆದು ಅವಘಢವನ್ನು ತಪ್ಪಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…