ಉಳ್ಳಾಲ: ನಿನ್ನೆ ತಡರಾತ್ರಿ ಉಳ್ಳಾಲ ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು, ಮನೆಮಂದಿ ಯುವಕನ ಅಂಗಾಂಗ ದಾನ ನಡೆಸಲು ಮುಂದಾಗಿದ್ದಾರೆ.
ಅಪಘಾತ ನಂತರ ಅವರನ್ನು ದೇರಳಕಟ್ಟೆ ಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದ ಹಿನ್ನೆಲೆಯಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿ ವೈದ್ಯರು ಗಾಯಾಳು ಮಿದುಳು ನಿಷ್ಕ್ರಿಯಗೊಂಡಿರುವುದನ್ನು ತಿಳಿಸಿದ್ದಾರೆ. ಸಂಜೆ 4 ಗಂಟೆ ನಂತರ ನಡೆದ ವೈದ್ಯಕೀಯ ಪರೀಕ್ಷೆ ಬಳಿಕ ಅಂಗಾಂಗ ದಾನ ನಡೆಸುವ ಕುರಿತು ಕುಟುಂಬಸ್ಥರು ಒಪ್ಪಿಗೆ ಸೂಚಿಸಿದರು.
ಮೃತ ಭೂಷಣ್ ಸಹೋದರಿಯ ವಿವಾಹ ಎರಡು ವಾರಗಳ ಹಿಂದೆಯಷ್ಟೇ ನೆರವೇರಿತ್ತು. ತಂದೆ ಮಾರಪ್ಪ ರೈ ವರ್ಷದ ಹಿಂದೆಯಷ್ಟೇ ಸಾವನ್ನಪ್ಪಿದ್ದರು. ಮೃತ ಭೂಷಣ್ ತಾಯಿ ಜತೆಗೆ ನೆಲೆಸಿದ್ದರು.
ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಲಾಯಿಸಿ ಬರುತ್ತಿದ್ದ ಭೂಷನ್ ರೈ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಗೆ ಗುದ್ದಿತ್ತು.
ಪರಿಣಾಮ ಭೂಷಣ್ ಇನ್ನೊಂದು ರಸ್ತೆಗೆ ಎಸೆಯಲ್ಪಟ್ಟಿದ್ದರು. ತಲೆಗೆ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಕೆಲಕಾಲ ಬಿದ್ದಿದ್ದ ಅವರನ್ನು ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಕೇರಳದ ಆಲ್ಟೋ ಕಾರಿನಲ್ಲಿದ್ದ ಐವರ ತಂಡ ತಕ್ಷಣ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದರು.
ತಲೆಗೆ ಗಾಯವಾಗಿರುವ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ… ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ…
ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ : 11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…
ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…
ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…
ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್ಆರ್ ಕಾರ್ಕಳ: ಕಾರ್ಕಳದ…
ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…