ಉಳ್ಳಾಲ: ಬೈಕ್ ಅಪಘಾತದಲ್ಲಿ ಇಂಟರ್ನಿ ವೈದ್ಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ಸಹ ಸವಾರ ಗಾಯಗೊಂಡಿರುವ ಘಟನೆ ಅಂಬ್ಲಮೊಗರು ಗ್ರಾಮದ ಮದಕಬಳಿ ಸೋಮವಾರ(ಡಿ.12) ತಡರಾತ್ರಿ ನಡೆದಿದೆ.
ಬೆಂಗಳೂರು ಯಶವಂತಪುರ ನಿವಾಸಿ ನಿಶಾಂತ್ (22) ಮೃತಪಟ್ಟ ವೈದ್ಯ ವಿದ್ಯಾರ್ಥಿ. ಸಹ ಸವಾರ ಬೀದರ್ ನಿವಾಸಿ ಶಕೀಬ್ ಅಪಘಾತದಲ್ಲಿ ಗಾಯಗೊಂಡಿದ್ದು, ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಬ್ಬರೂ ನಾಟೆಕಲ್ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರೈಸಿ ಇಂಟರ್ನ್ ಶಿಪ್ ಮಾಡುತ್ತಿದ್ದರು. ಕುತ್ತಾರ್ ನಲ್ಲಿರುವ ಫ್ಲ್ಯಾಟ್ ಒಂದರಲ್ಲಿ ವಾಸಿಸುತ್ತಿದ್ದ ಇಬ್ಬರೂ ರಾತ್ರಿ ಬೈಕ್ ರೈಡ್ ತೆರಳಿದ್ದ ಸಂದರ್ಭ ರಸ್ತೆಯಲ್ಲಿದ್ದ ಹಂಪ್ ಗಮನಕ್ಕೆ ಬಾರದೇ, ಬೈಕ್ ಮೇಲಕ್ಕೆ ಹಾರಿ ಇಬ್ಬರೂ ಎಸೆಯಲ್ಪಟ್ಟು, ಸವಾರ ನಿಶಾಂತ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹೆಚ್ಚು ವಾಹನ ಸಂಚಾರವಿಲ್ಲದ ರಸ್ತೆಯಾಗಿದ್ದರಿಂದ ರಾತ್ರಿ 12.15 ರ ವೇಳೆಗೆ ಅಪಘಾತ ಸಂಭವಿಸಿದ್ದರೂ 12.30 ವೇಳೆ ಸ್ಥಳೀಯರ ಗಮನಕ್ಕೆ ಬಂದು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಮೃತ ಏಕೈಕ ಪುತ್ರನಾಗಿದ್ದು, ಇನ್ನೆರಡು ತಿಂಗಳಲ್ಲಿ ನಡೆಯುವ ಘಟಿಕೋತ್ಸವದಲ್ಲಿ ವೈದ್ಯಕೀಯ ಪದವಿ ಪಡೆಯಬೇಕಿತ್ತು. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…