ಉಳ್ಳಾಲ: ಮಸೀದಿಗಳಲ್ಲಿ ಶಸ್ತ್ರಾಸ್ತ್ರಗಳ ಸಂಗ್ರಹವಿದೆ ಎಂಬ ಹೇಳಿಕೆ ನೀಡಿರುವ ಶಾಸಕ ಹರೀಶ್ ಪೂಂಜಾರನ್ನು ಕೂಡಲೇ ಬಂಧಿಸಿ ತನಿಖೆಗೊಳಪಡಿಸಬೇಕು ಎಂದು ಮಂಗಳೂರು ಪೊಲೀಸ್ ಕಮಿಷನರ್ಗೆ ಉಳ್ಳಾಲ ಮೇಲಂಗಡಿ ಮೊಹಲ್ಲಾದ ಮುಸ್ಲಿಮರು ಮನವಿ ಸಲ್ಲಿಸಿದ್ದಾರೆ.
ಸಾಮಾಜಿಕ ನೇತಾರ ಫಾರೂಕ್ ಉಳ್ಳಾಲ್, ಮೇಲಂಗಡಿ ಮುಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷ ಮುಸ್ತಫಾ ಅಬ್ದುಲ್ಲಾ, ಮಸೀದಿಯ ಇಮಾಮ್ ಮೌಲಾನ ಮುಹಮ್ಮದ್ ಅಲಿ ಮದನಿಯವರ ನೇತೃತ್ವದ ನಿಯೋಗ ಮನವಿ ಸಲ್ಲಿಸಿದೆ.
ಬಿಜೆಪಿಯ ಶಾಸಕ ಹರೀಶ್ ಪೂಂಜಾ ಪದೇ ಪದೇ ಮುಸ್ಲಿಮರನ್ನು ಅವಹೇಳನ ಮಾಡುವ, ಜನಸಾಮಾನ್ಯರಲ್ಲಿ ಮುಸ್ಲಿಂ ದ್ವೇಷ ತುಂಬುವ, ಮುಸ್ಲಿಮರ ಬಗ್ಗೆ ಅಪನಂಬಿಕೆ ಮೂಡಿಸುವ ಹೀನ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಮುಸ್ಲಿಂ ಸಮಾಜದ ವಿರುದ್ಧ ಸುಳ್ಳಾರೋಪವನ್ನು ಹೊರಿಸುತ್ತಿರುವ ಹರೀಶ್ ಪೂಂಜಾರನ್ನು ಬಂಧಿಸಬೇಕು. ಜೊತೆಗೆ ಶಾಸಕ ಭರತ್ ಶೆಟ್ಟಿ, ಬಜರಂಗ ದಳದ ಶರಣ್ ಪಂಪ್ವೆಲ್ ಮತ್ತಿತರರು ಕೂಡಾ ಮುಸ್ಲಿಮರ ಮನುಸ್ಸುಗಳನ್ನು ಘಾಸಿಗೊಳಿಸುವ ಪ್ರಯತ್ನಕ್ಕೆ ಇಳಿದಿದ್ದಾರೆ. ಪೊಲೀಸ್ ಇಲಾಖೆಯು ಕೋಮುವಾದಿ ಶಕ್ತಿಗಳ ಪ್ರಚೋದನಾತ್ಮಕ ಹೇಳಿಕೆಗಳ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳದೇ ಲಘುವಾಗಿ ಪರಿಗಣಿಸುವುದರಿಂದಲೇ ಇವರ ಆಟಾಟೋಪ ಅಂಕೆ ಮೀರುತ್ತಿದೆ ಎಂದು ನಿಯೋಗ ಮನವಿ ಮಾಡಿಕೊಟ್ಟಿತ್ತು.
ನಿಯೋಗದಲ್ಲಿ ಪ್ರಮುಖರಾದ ನಝೀರ್ ಬಾರ್ಲಿ, ಹೊಸಪಳ್ಳಿ ಆಡಳಿತ ಸಮಿತಿಯ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಅದ್ದಾಮ, ಪ್ರಧಾನ ಕಾರ್ಯದರ್ಶಿ ಮೊಹಿಯುದ್ದೀನ್, ಆಡಳಿತ ಸಮಿತಿಯ ಪ್ರಮುಖರಾದ ರಹ್ಮಾನ್ ಹಳೆಕೋಟೆ, ಕಬೀರ್ ಬುಖಾರಿ, ಸವ್ವಾದ್ ಅಬ್ದುಲ್ಲಾ, ಮುಹಿಯುದ್ದೀನ್ ಗುಂಡಿಹಿತ್ಲು, ಹುಸೈನ್ ಮಿಲ್ಲತ್ ಉಪಸ್ಥಿತರಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…