ಉಳ್ಳಾಲ: ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಸೋಮೇಶ್ವರ ಉಚ್ಚಿಲ ಮೀನುಗಾರರ ಬಲೆಗೆ ಬಿದ್ದಿದೆ. ಸಮುದ್ರ ತಟದ ಸಮೀಪ ಬೀಸಿದ ಬಲೆಗೆ ಇಂದು ಸಂಜೆ ಹೊತ್ತಿಗೆ 75 ಕೆ.ಜಿ ಯ ಮೀನು ಬಲೆಗೆ ಬಿದ್ದಿದೆ.
ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ಸಮುದ್ರ ತೀರದಲ್ಲಿ ಹಾಕಲಾಗಿದ್ದ ಬಲೆಗೆ ಮೀನು ಬಿದ್ದಿದೆ. ಈ ವರ್ಷದ ತಮ್ಮ ಮೀನುಗಾರಿಕೆಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಅನ್ನುವ ಅಭಿಪ್ರಾಯ ಅವರದ್ದಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ. ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆಯೂ ಇದೆ. ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ. ಆದರೆ ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ. ವ್ಯಾಪಾರ ಮಾಡುತ್ತಿದ್ದರೆ ಕೆಜಿಗೆ ರೂ. 200 ರಷ್ಟಿದೆ. ಆದರೆ ಸಿಕ್ಕ ಮೀನನ್ನು ವ್ಯಾಪಾರ ಮಾಡದೇ , ಈದ್ ಹಬ್ಬ ಇರುವುದರಿಂದ ತಮ್ಮೊಳಗೆ ಹಂಚಿಕೊಂಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…