ಉಳ್ಳಾಲ: ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಸೋಮೇಶ್ವರ ಉಚ್ಚಿಲ ಮೀನುಗಾರರ ಬಲೆಗೆ ಬಿದ್ದಿದೆ. ಸಮುದ್ರ ತಟದ ಸಮೀಪ ಬೀಸಿದ ಬಲೆಗೆ ಇಂದು ಸಂಜೆ ಹೊತ್ತಿಗೆ 75 ಕೆ.ಜಿ ಯ ಮೀನು ಬಲೆಗೆ ಬಿದ್ದಿದೆ.
ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ಸಮುದ್ರ ತೀರದಲ್ಲಿ ಹಾಕಲಾಗಿದ್ದ ಬಲೆಗೆ ಮೀನು ಬಿದ್ದಿದೆ. ಈ ವರ್ಷದ ತಮ್ಮ ಮೀನುಗಾರಿಕೆಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಅನ್ನುವ ಅಭಿಪ್ರಾಯ ಅವರದ್ದಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ. ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆಯೂ ಇದೆ. ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ. ಆದರೆ ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ. ವ್ಯಾಪಾರ ಮಾಡುತ್ತಿದ್ದರೆ ಕೆಜಿಗೆ ರೂ. 200 ರಷ್ಟಿದೆ. ಆದರೆ ಸಿಕ್ಕ ಮೀನನ್ನು ವ್ಯಾಪಾರ ಮಾಡದೇ , ಈದ್ ಹಬ್ಬ ಇರುವುದರಿಂದ ತಮ್ಮೊಳಗೆ ಹಂಚಿಕೊಂಡಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…