ಉಳ್ಳಾಲ: ಮೀನು ಮಾರಾಟಗಾರನ ಮೇಲೆ‌ ತಲವಾರಿನಿಂದ ದಾಳಿ: ₹2 ಲಕ್ಷ ದರೋಡೆ – Vishwanews24

Featured, ದಕ್ಷಿಣ ಕನ್ನಡ

ಉಳ್ಳಾಲ: ಮೀನು ಮಾರಾಟಗಾರನ ಮೇಲೆ‌ ತಲವಾರಿನಿಂದ ದಾಳಿ: ₹2 ಲಕ್ಷ ದರೋಡೆ – Vishwanews24

ಉಳ್ಳಾಲ: ಕಲ್ಲಾಪು ಬಳಿ ಮೀನು ಮಾರಾಟ ನಡೆಸುತ್ತಿರುವ ವ್ಯಾಪಾರಿಯನ್ನು ತಡೆದ ಮೂವರು ಮುಸುಕುಧಾರಿ ತಂಡ ತಲವಾರಿನಿಂದ ಹಲ್ಲೆ ಮಾಡಿದ್ದು, ಟೆಂಪೋದಲ್ಲಿದ್ದ ₹2 ಲಕ್ಷ ದರೋಡೆ ಮಾಡಿದೆ.

ನಗರದ ನೇತ್ರಾವತಿ ಸೇತುವೆ ಸಮೀಪ ಶನಿವಾರ ನಸುಕಿನ ಜಾವ ಈ ಘಟನೆ ನಡೆದಿದೆ. ಉಳ್ಳಾಲ ಮುಕ್ಕಚ್ಚೇರಿ ಹೈದರಾಲಿ ರಸ್ತೆ ನಿವಾಸಿ ಮುಸ್ತಾಫ ದರೋಡೆಗೆ ಒಳಗಾದವರು.

ಕಲ್ಲಾಪು ಸಮೀಪ ಮೀನು ಮಾರಾಟ ಮಾಡುತ್ತಿರುವ ಇವರು ಎಂದಿನಂತೆ ಮನೆಯಿಂದ ಧಕ್ಕೆಗೆ ಟೆಂಪೋ ಮೂಲಕ ಮೀನು ಖರೀದಿಸಲು ತೆರಳುತ್ತಿದ್ದರು. ಈ ವೇಳೆ ತೊಕ್ಕೊಟ್ಟು ಕಡೆಯಿಂದ ಕಾರಿನಲ್ಲಿ ತಂಡವೊಂದು ಟೆಂಪೋವನ್ನು ಹಿಂಬಾಲಿಸಿದೆ‌. ನೇತ್ರಾವತಿ ಸೇತುವೆ ಸಮೀಪ ಅಡ್ಡಗಟ್ಟಿದೆ. ಬಳಿಕ ನಿರಂತರ ಹಾರನ್ ಹಾಕುವುದನ್ನು ಪ್ರಶ್ನಿಸಲು ಮುಸ್ತಾಫ ಅವರು ಕೆಳಗಿಳಿಯುತ್ತಿದ್ದಂತೆ ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರು ಮುಸುಕುಧಾರಿಗಳು ತಲವಾರಿನಿಂದ ದಾಳಿ ನಡೆಸಿದ್ದಾರೆ.

ಉಡುಪಿ:  ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನಕ್ಕೆ ನೂತನ ಧ್ವಜಸ್ತಂಭ ಸಮರ್ಪಣೆ – Vishwanews24

ಟೆಂಪೋ ಡ್ಯಾಷ್ ಬೋರ್ಡಿನಲ್ಲಿರಿಸಿದ್ದ ₹2 ಲಕ್ಷ ನಗದನ್ನು ದರೋಡೆ ಮಾಡಿ ಪರಾರಿಯಾಗಿದ್ದಾರೆ. ಗಾಯಾಳು ಮುಸ್ತಾಫ ಅವರನ್ನು ರಸ್ತೆ ಮೂಲಕ ತೆರಳುತ್ತಿದ್ದ ವ್ಯಕ್ತಿಯೊಬ್ಬರು ತೊಕ್ಕೊಟ್ಟು ನೇತಾಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎಸಿಪಿ ದಿನಕರ್ ಶೆಟ್ಟಿ ನೇತೃತ್ಬದ ಪೊಲೀಸ್ ತಂಡ ತನಿಖೆ ಆರಂಭಿಸಿದೆ.

ಬೆಂಗಳೂರು : ಡಿಬಾರ್ ಮಾಡಿದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ – Vishwanews24

Leave a Reply