ಉಳ್ಳಾಲ: ಕಲ್ಲಾಪು ಬಳಿ ಮೀನು ಮಾರಾಟ ನಡೆಸುತ್ತಿರುವ ವ್ಯಾಪಾರಿಯನ್ನು ತಡೆದ ಮೂವರು ಮುಸುಕುಧಾರಿ ತಂಡ ತಲವಾರಿನಿಂದ ಹಲ್ಲೆ ಮಾಡಿದ್ದು, ಟೆಂಪೋದಲ್ಲಿದ್ದ ₹2 ಲಕ್ಷ ದರೋಡೆ ಮಾಡಿದೆ.
ನಗರದ ನೇತ್ರಾವತಿ ಸೇತುವೆ ಸಮೀಪ ಶನಿವಾರ ನಸುಕಿನ ಜಾವ ಈ ಘಟನೆ ನಡೆದಿದೆ. ಉಳ್ಳಾಲ ಮುಕ್ಕಚ್ಚೇರಿ ಹೈದರಾಲಿ ರಸ್ತೆ ನಿವಾಸಿ ಮುಸ್ತಾಫ ದರೋಡೆಗೆ ಒಳಗಾದವರು.
ಕಲ್ಲಾಪು ಸಮೀಪ ಮೀನು ಮಾರಾಟ ಮಾಡುತ್ತಿರುವ ಇವರು ಎಂದಿನಂತೆ ಮನೆಯಿಂದ ಧಕ್ಕೆಗೆ ಟೆಂಪೋ ಮೂಲಕ ಮೀನು ಖರೀದಿಸಲು ತೆರಳುತ್ತಿದ್ದರು. ಈ ವೇಳೆ ತೊಕ್ಕೊಟ್ಟು ಕಡೆಯಿಂದ ಕಾರಿನಲ್ಲಿ ತಂಡವೊಂದು ಟೆಂಪೋವನ್ನು ಹಿಂಬಾಲಿಸಿದೆ. ನೇತ್ರಾವತಿ ಸೇತುವೆ ಸಮೀಪ ಅಡ್ಡಗಟ್ಟಿದೆ. ಬಳಿಕ ನಿರಂತರ ಹಾರನ್ ಹಾಕುವುದನ್ನು ಪ್ರಶ್ನಿಸಲು ಮುಸ್ತಾಫ ಅವರು ಕೆಳಗಿಳಿಯುತ್ತಿದ್ದಂತೆ ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರು ಮುಸುಕುಧಾರಿಗಳು ತಲವಾರಿನಿಂದ ದಾಳಿ ನಡೆಸಿದ್ದಾರೆ.
ಟೆಂಪೋ ಡ್ಯಾಷ್ ಬೋರ್ಡಿನಲ್ಲಿರಿಸಿದ್ದ ₹2 ಲಕ್ಷ ನಗದನ್ನು ದರೋಡೆ ಮಾಡಿ ಪರಾರಿಯಾಗಿದ್ದಾರೆ. ಗಾಯಾಳು ಮುಸ್ತಾಫ ಅವರನ್ನು ರಸ್ತೆ ಮೂಲಕ ತೆರಳುತ್ತಿದ್ದ ವ್ಯಕ್ತಿಯೊಬ್ಬರು ತೊಕ್ಕೊಟ್ಟು ನೇತಾಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎಸಿಪಿ ದಿನಕರ್ ಶೆಟ್ಟಿ ನೇತೃತ್ಬದ ಪೊಲೀಸ್ ತಂಡ ತನಿಖೆ ಆರಂಭಿಸಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…