Featured

ಉಳ್ಳಾಲ: ಮೀನು ಮಾರಾಟಗಾರನ ಮೇಲೆ‌ ತಲವಾರಿನಿಂದ ದಾಳಿ: ₹2 ಲಕ್ಷ ದರೋಡೆ – Vishwanews24

ಉಳ್ಳಾಲ: ಮೀನು ಮಾರಾಟಗಾರನ ಮೇಲೆ‌ ತಲವಾರಿನಿಂದ ದಾಳಿ: ₹2 ಲಕ್ಷ ದರೋಡೆ – Vishwanews24

ಉಳ್ಳಾಲ: ಕಲ್ಲಾಪು ಬಳಿ ಮೀನು ಮಾರಾಟ ನಡೆಸುತ್ತಿರುವ ವ್ಯಾಪಾರಿಯನ್ನು ತಡೆದ ಮೂವರು ಮುಸುಕುಧಾರಿ ತಂಡ ತಲವಾರಿನಿಂದ ಹಲ್ಲೆ ಮಾಡಿದ್ದು, ಟೆಂಪೋದಲ್ಲಿದ್ದ ₹2 ಲಕ್ಷ ದರೋಡೆ ಮಾಡಿದೆ.

ನಗರದ ನೇತ್ರಾವತಿ ಸೇತುವೆ ಸಮೀಪ ಶನಿವಾರ ನಸುಕಿನ ಜಾವ ಈ ಘಟನೆ ನಡೆದಿದೆ. ಉಳ್ಳಾಲ ಮುಕ್ಕಚ್ಚೇರಿ ಹೈದರಾಲಿ ರಸ್ತೆ ನಿವಾಸಿ ಮುಸ್ತಾಫ ದರೋಡೆಗೆ ಒಳಗಾದವರು.

ಕಲ್ಲಾಪು ಸಮೀಪ ಮೀನು ಮಾರಾಟ ಮಾಡುತ್ತಿರುವ ಇವರು ಎಂದಿನಂತೆ ಮನೆಯಿಂದ ಧಕ್ಕೆಗೆ ಟೆಂಪೋ ಮೂಲಕ ಮೀನು ಖರೀದಿಸಲು ತೆರಳುತ್ತಿದ್ದರು. ಈ ವೇಳೆ ತೊಕ್ಕೊಟ್ಟು ಕಡೆಯಿಂದ ಕಾರಿನಲ್ಲಿ ತಂಡವೊಂದು ಟೆಂಪೋವನ್ನು ಹಿಂಬಾಲಿಸಿದೆ‌. ನೇತ್ರಾವತಿ ಸೇತುವೆ ಸಮೀಪ ಅಡ್ಡಗಟ್ಟಿದೆ. ಬಳಿಕ ನಿರಂತರ ಹಾರನ್ ಹಾಕುವುದನ್ನು ಪ್ರಶ್ನಿಸಲು ಮುಸ್ತಾಫ ಅವರು ಕೆಳಗಿಳಿಯುತ್ತಿದ್ದಂತೆ ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರು ಮುಸುಕುಧಾರಿಗಳು ತಲವಾರಿನಿಂದ ದಾಳಿ ನಡೆಸಿದ್ದಾರೆ.

ಟೆಂಪೋ ಡ್ಯಾಷ್ ಬೋರ್ಡಿನಲ್ಲಿರಿಸಿದ್ದ ₹2 ಲಕ್ಷ ನಗದನ್ನು ದರೋಡೆ ಮಾಡಿ ಪರಾರಿಯಾಗಿದ್ದಾರೆ. ಗಾಯಾಳು ಮುಸ್ತಾಫ ಅವರನ್ನು ರಸ್ತೆ ಮೂಲಕ ತೆರಳುತ್ತಿದ್ದ ವ್ಯಕ್ತಿಯೊಬ್ಬರು ತೊಕ್ಕೊಟ್ಟು ನೇತಾಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎಸಿಪಿ ದಿನಕರ್ ಶೆಟ್ಟಿ ನೇತೃತ್ಬದ ಪೊಲೀಸ್ ತಂಡ ತನಿಖೆ ಆರಂಭಿಸಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

11 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

11 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

11 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

11 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

11 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

12 hours ago